ಮೈಸೂರು: ಭೂಗತ ಪಾತಕಿ ರವಿ ಪೂಜಾರಿ ವಿಚಾರಣೆಗಾಗಿ ನಗರ ಪೊಲೀಸ್ ತಂಡವೊಂದು ಸದ್ಯದಲ್ಲೇ ಬೆಂಗಳೂರಿಗೆ ತೆರಳಲಿದೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಿಸಿಪಿ ಡಾ.ಎ.ಎನ್.ಪ್ರಕಾಶ್ಗೌಡ, ‘ರವಿ ಪೂಜಾರಿ ವಿರುದ್ಧ ನಗರ ಠಾಣೆಯಲ್ಲಿ ಎರಡು ದೂರುಗಳು ದಾಖಲಾಗಿವೆ. ಸದ್ಯದಲ್ಲೇ ತಂಡವೊಂದು ಬೆಂಗಳೂರಿಗೆ ತೆರಳಿ ವಿಚಾರಣೆ ನಡೆಸಲಿದೆ. ಅಗತ್ಯ ಬಿದ್ದಲ್ಲಿ ವಶಕ್ಕೆ ತೆಗೆದುಕೊಳ್ಳುವ ಪ್ರಯತ್ನ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.