ADVERTISEMENT

ಮೈಸೂರು: ನ.25ರಿಂದ ಹವ್ಯಾಸಿ ರಂಗ ಕಲಾವಿದರಿಂದ ನಾಟಕ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2021, 6:48 IST
Last Updated 24 ನವೆಂಬರ್ 2021, 6:48 IST
	ಸುದ್ದಿಗೋಷ್ಠಿಯಲ್ಲಿ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಮಾತನಾಡಿದರು   

ಮೈಸೂರು: ಇಲ್ಲಿನ ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ನ. 25 ರಂದು ಸಂಜೆ 6.30 ಕ್ಕೆ ಸುಬ್ಬಯ್ಯ ನಾಯ್ಡು ರಂಗಕಾರ್ಯಾಗಾರದ ಶಿಬಿರಾರ್ಥಿಗಳು ಸಾರಾ ಅಬೂಬಕರ್ ಅವರ ಚಂದ್ರಗಿರಿಯ ತೀರದಲ್ಲಿ ನಾಟಕವನ್ನು ಪ್ರದರ್ಶಿಸಲಿದ್ದಾರೆ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ತಿಳಿಸಿದರು.

ಎಸ್.ರಾಮು ನಿರ್ದೇಶನದಲ್ಲಿ ಪ್ರದರ್ಶನಗೊಳ್ಳುವ ಈ ನಾಟಕಕ್ಕೆ ಮುಖ್ಯ ಅತಿಥಿಯಾಗಿ ರಂಗಕರ್ಮಿ ನಂದಾ ಹಳೆಮನೆ ಭಾಗವಹಿಸುವರು ಎಂದು ಅವರು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನ.26ರಂದು ಸಂಜೆ 6.30ಕ್ಕೆ ಪದ್ಮಶ್ರೀ ಆರ್.ನಾಗರತ್ನಮ್ಮ ರಂಗ ಕಾರ್ಯಾಗಾರದ ಶಿಬಿರಾರ್ಥಿಗಳು ಎಚ್.ಎಸ್.ವೆಂಕಟೇಶಮೂರ್ತಿ ಅವರ ಚಿತ್ರಪಟ ನಟಕವನ್ನು ಜೀವನ್ ಕುಮಾರ್ ಬಿ ಹೆಗ್ಗೋಡು ನಿರ್ದೇಶನದಲ್ಲಿ ಪ್ರದರ್ಶಿಸಲಿದ್ದು, ನಟ ಶಿವಾಜಿರಾವ್ ಜಾದವ್ ಅತಿಥಿಯಾಗಿ ಭಾಗವಹಿಸುವರು ಎಂದು ಅವರು ಹೇಳಿದರು.

ರಂಗಾಯಣವು ಹವ್ಯಾಸಿ ಕಲಾವಿದರಿಗಾಗಿ ಸೆ. 1ರಿಂದ ಸುಬ್ಬಯ್ಯ ನಾಯ್ಡು ಮತ್ತು ಪದ್ಮಶ್ರೀ ಆರ್.ನಾಗರತ್ನಮ್ಮ ರಂಗಕಾರ್ಯಾಗಾರ ನಡೆಸಿದ್ದು, 35 ಮಂದಿ ಇದರಲ್ಲಿ ಭಾಗವಹಿಸಿದ್ದರು ಎಂದರು‌. ಡಿ.10ರಿಂದ ಆರಂಭವಾಗಲಿರುವ ಬಹೂರೂಪಿಯಲ್ಲಿನ ಮಳಿಗೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.