ADVERTISEMENT

ಸಬ್‌ಇನ್‌ಸ್ಪೆಕ್ಟರ್‌ ಸ್ಕೂಟರ್‌ ಕಳವು

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 9:57 IST
Last Updated 10 ಜೂನ್ 2020, 9:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ಇಲ್ಲಿನ ಲಕ್ಷ್ಮೀಪುರಂ ಸಬ್‌ಇನ್‌ಸ್ಪೆಕ್ಟರ್ ಎಂ.ಎಸ್.ಭಂಡಿ ಅವರ ಸ್ಕೂಟರ್‌ನ್ನು ಅವರ ನಿವಾಸದ ಎದುರಿನಿಂದಲೇ ಕಳ್ಳರು ಕಳವು ಮಾಡಿದ್ದಾರೆ. ಈ ಕುರಿತು ಕೆ.ಆರ್.ಠಾಣೆಗೆ ದೂರು ನೀಡಿದ್ದಾರೆ.

ಚಾಕುವಿನಿಂದ ಹಲ್ಲೆ: ರಸ್ತೆ ಮಧ್ಯದಲ್ಲಿ ನಿಲ್ಲಿಸಿದ್ದ ಬೈಕ್‌ನ್ನು ಪಕ್ಕಕ್ಕೆ ನಿಲ್ಲಿಸಲು ಹೇಳಿದ ಜಯನಗರದ ನಿವಾಸಿ ಸ್ವಾಮಿ (36) ಎಂಬುವವರ ಮೇಲೆ ಮನು (27) ಎಂಬಾತ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಕುವೆಂಪುನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪಂಚಮಂತ್ರ ರಸ್ತೆಯಲ್ಲಿ ಮನು ಮದ್ಯ ಸೇವಿಸಿ ಬೈಕ್‌ನ್ನು ರಸ್ತೆ ಮಧ್ಯೆ ನಿಲ್ಲಿಸಿದಾಗ ಗಲಾಟೆ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.