ADVERTISEMENT

ಮೈಸೂರಿನ ಪಬ್‌ನಲ್ಲಿ ಜಗಳ | CCB ಇನ್‌ಸ್ಪೆಕ್ಟರ್ ಅಮಾನತು: ಸೀಮಾ ಲಾಟ್ಕರ್‌ ಆದೇಶ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2025, 16:11 IST
Last Updated 18 ಆಗಸ್ಟ್ 2025, 16:11 IST
<div class="paragraphs"><p>ಪೊಲೀಸ್&nbsp; – ಪ್ರಾತಿನಿಧಿಕ ಚಿತ್ರ</p></div>

ಪೊಲೀಸ್  – ಪ್ರಾತಿನಿಧಿಕ ಚಿತ್ರ

   

ಮೈಸೂರು: ಪಬ್‌ನಲ್ಲಿ ಜಗಳವಾಡಿದ ಆರೋಪದಲ್ಲಿ ಸಿಸಿಬಿ ಇನ್‌ಸ್ಪೆಕ್ಟರ್‌ ಮೋಹನ್‌ ಕುಮಾರ್‌ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್‌ ಆಯುಕ್ತೆ ಸೀಮಾ ಲಾಟ್ಕರ್‌ ಸೋಮವಾರ ಆದೇಶ ಹೊರಡಿಸಿದ್ದಾರೆ.

ಮೋಹನ್‌ ಚಾಮುಂಡಿ ಬೆಟ್ಟದ ರಸ್ತೆಯ ಜೆಸಿ ನಗರದ ಪಬ್‌ಗೆ ತೆರಳಿ, ಕ್ಷುಲ್ಲಕ ಕಾರಣಕ್ಕೆ ಅಲ್ಲಿದ್ದವರೊಂದಿಗೆ ಜಗಳವಾಡಿದ್ದಾರೆ. ಈ ವೇಳೆ ತಡೆಯಲು ಬಂದ ಸಿಬ್ಬಂದಿಗೆ ‘ನಾನು ಸಿಸಿಬಿ ಪೊಲೀಸ್‌ ಅಧಿಕಾರಿ. ನೀವು ನನ್ನನ್ನು ಏನೂ ಮಾಡಲು ಆಗುವುದಿಲ್ಲ’ ಎಂದು ಬೆದರಿಕೆ ಒಡ್ಡಿದ್ದಾರೆ.

ADVERTISEMENT

ಈ ಘಟನೆಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಕೆಲವರು, ಸಾರ್ವಜನಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಷಯ ತಿಳಿದ ಆಯುಕ್ತರು ಆದೇಶ ಪ್ರಕಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.