ADVERTISEMENT

ಮೈಸೂರು: ‘ಪ್ರಜಾವಾಣಿ ಓದು’ ಕಾರ್ಯಕ್ರಮ ನಾಳೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 3:45 IST
Last Updated 19 ಸೆಪ್ಟೆಂಬರ್ 2025, 3:45 IST
   

ಮೈಸೂರು: ‘ಪ್ರಜಾವಾಣಿ’ ಹಾಗೂ ಎಸ್‌.ಶ್ರೀಕಾಂತ್‌ ನೇತೃತ್ವದಲ್ಲಿ ಜಯಪುರದ ರಾಘವೇಂದ್ರ ವಿದ್ಯಾಪೀಠ ಪ್ರೌಢಶಾಲೆಯಲ್ಲಿ ಸೆ.20 (ಶನಿವಾರ) ರಂದು ಬೆಳಿಗ್ಗೆ 10.30ಕ್ಕೆ ‘ಪತ್ರಿಕೆ ಓದು’ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಮಾಜ ಸೇವಕ ಎಸ್‌.ಶ್ರೀಕಾಂತ್‌ ಕಾರ್ಯಕ್ರಮ ಉದ್ಘಾಟಿಸಲಿದ್ದು, ‘ಪ್ರಜಾವಾಣಿ’ಯ ಮೈಸೂರು ಬ್ಯೂರೋ ಮುಖ್ಯಸ್ಥ ಕೆ. ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಡಿ.ಮಾಲೇಗೌಡ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. 

ಮೈಸೂರು ಗ್ರಾಮಾಂತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್‌, ಜಯಪುರ ನಾಡಕಚೇರಿಯ ಉಪತಹಶೀಲ್ದಾರ್‌ ಮಂಜುನಾಥ್‌, ‘ಡೆಕ್ಕನ್‌ ಹೆರಾಲ್ಡ್‌’ ಮತ್ತು ‘ಪ್ರಜಾವಾಣಿ’ ಪ್ರಸರಣ ವಿಭಾಗದ ಹಿರಿಯ ವ್ಯವಸ್ಥಾಪಕ ಹರವೆ ಸಂಗಣ್ಣ ಪ್ರಕಾಶ್‌, ಜಯ‍ಪುರ ಠಾಣೆ ಎಸ್‌ಐ ಕಾಳೇಗೌಡ, ನಿವೃತ್ತ ಮುಖ್ಯಶಿಕ್ಷಕ ಎಸ್‌.ವೈದ್ಯನಾಥ್‌, ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ್‌ ಕುಮಾರ್‌ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ADVERTISEMENT

ರಾಘವೇಂದ್ರ ವಿದ್ಯಾಪೀಠ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕ ಸಿದ್ದರಾಮ, ದೈಹಿಕ ಶಿಕ್ಷಣ ಶಿಕ್ಷಕ ಜಿ.ಕುಮಾರಸ್ವಾಮಿ, ಜಯಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಕೆ.ಜೆ.ಜಯಭಾರತಿ, ಮಾವಿನಹಳ್ಳಿ ಶಾಲೆಯ ಮುಖ್ಯಶಿಕ್ಷಕಿ ಕೆ.ಗಾಯತ್ರಿ, ಗುಮಚನಹಳ್ಳಿ ಶಾಲೆಯ ಮುಖ್ಯಶಿಕ್ಷಕಿ ಸರೋಜಮ್ಮ, ಕೆಲ್ಲಹಳ್ಳಿ ಶಾಲೆಯ ಮುಖ್ಯಶಿಕ್ಷಕ ಎಂ.ದೇವಣ್ಣ, ಬರಡನಪುರ ಶಾಲೆಯ ಮುಖ್ಯಶಿಕ್ಷಕ ಎಸ್‌.ಎಚ್‌.ಉಷಾ, ದಾರಿಪುರ ಶಾಲೆಯ ಮುಖ್ಯಶಿಕ್ಷಕ ಎಸ್‌.ಜೆ.ಕುಮಾರ, ಸೋಲಿಗರ ಕಾಲೊನಿ ಶಾಲೆಯ ಮುಖ್ಯಶಿಕ್ಷಕಿ ಟಿ.ಎಂ.ಭವ್ಯಾ, ಜಯಪುರ ಉರ್ದು ಶಾಲೆಯ ಮುಖ್ಯಶಿಕ್ಷಕಿ ಹಸೀನಾ ಬೇಗಂ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.