ADVERTISEMENT

ಮೈಸೂರು ಜಿಲ್ಲೆ ಎಸ್‌ಪಿ ಹಾಗೂ ಮೈಸೂರು ನಗರ ಡಿಸಿಪಿ ವರ್ಗಾವಣೆ

ಆರ್.ಚೇತನ್ ನೂತನ ಪೊಲೀಸ್ ವರಿಷ್ಠಾಧಿಕಾರಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 15:43 IST
Last Updated 9 ಜೂನ್ 2021, 15:43 IST
ಸಿ.ಬಿ.ರಿಷ್ಯಂತ್
ಸಿ.ಬಿ.ರಿಷ್ಯಂತ್   

ಮೈಸೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ದಾವಣಗೆರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.

ಉಡುಪಿ ಕರಾವಳಿ ಕಾವಲು ಪೊಲೀಸ್‌ ಪಡೆಯಎಸ್‌ಪಿಯಾಗಿದ್ದ ಆರ್.ಚೇತನ್ ಅವರು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗೆ ವರ್ಗಾವಣೆಯಾಗಿದ್ದಾರೆ.

2010ರ ಐಪಿಎಸ್‌ ಶ್ರೇಣಿಯ ಅಧಿಕಾರಿಯಾದ ಆರ್.ಚೇತನ್ ಅವರು ಈ ಹಿಂದೆ ದಾವಣಗೆರೆ, ಬಳ್ಳಾರಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಎಸ್‌.ಪಿಯಾಗಿ ಕಾರ್ಯನಿರ್ವಹಿಸಿದ್ದರು.

ADVERTISEMENT

ಡಿಸಿಪಿ ವರ್ಗಾವಣೆ:ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಡಾ.ಎ.ಎನ್.ಪ್ರಕಾಶ್‌ಗೌಡ ಅವರು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

ಇವರ ಸ್ಥಾನಕ್ಕೆ ಆಂತರಿಕ ಭದ್ರತಾ ವಿಭಾಗದ ವರಿಷ್ಠಾಧಿಕಾರಿಯಾಗಿದ್ದ ಪ್ರದೀಪ್ ಗುಂಟಿ ಅವರು ವರ್ಗಾವಣೆಯಾಗಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.