ಮೈಸೂರು: ‘ರಾಜ್ಯ ಸರ್ಕಾರ ಸುಭದ್ರವಾಗಿದೆ. ಹೊರಗಿನಿಂದ ಶಾಸಕರನ್ನು ಕರೆದುಕೊಂಡು ಬಂದು ಆಡಳಿತ ನಡೆಸುವ ಅಗತ್ಯ ನಮಗಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೋಮವಾರ ತಿಳಿಸಿದರು.
‘ನಮ್ಮ ಪಕ್ಷದ ಶಾಸಕರು ಪ್ರತ್ಯೇಕ ಸಭೆ ನಡೆಸಿಲ್ಲ. ರೊಟ್ಟಿ ತಿನ್ನಲು ಒಂದೆಡೆ ಸೇರಿ ಅಭಿವೃದ್ಧಿ ವಿಚಾರ ಚರ್ಚಿಸಿದ್ದಾರೆ. ಯಾರೂ ಯಾವುದೇ ಬೇಡಿಕೆ ಇಟ್ಟಿಲ್ಲ. ಯಾರನ್ನೂ ಬ್ಲ್ಯಾಕ್ಮೇಲ್ ಮಾಡುತ್ತಿಲ್ಲ. ಅಶಿಸ್ತಿಗೆ ನಮ್ಮ ಪಕ್ಷದಲ್ಲಿ ಅವಕಾಶ ಇಲ್ಲ. ಅಂಥ ಸಂದರ್ಭ ಬಂದರೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.