ADVERTISEMENT

16ರಂದು ನಂಜನಗೂಡು ದೊಡ್ಡಜಾತ್ರೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2022, 20:23 IST
Last Updated 3 ಮಾರ್ಚ್ 2022, 20:23 IST

ನಂಜನಗೂಡು: ಇಲ್ಲಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಮಾರ್ಚ್ 16ರ ಬುಧವಾರ ಗೌತಮ ರಥೋತ್ಸವ, ದೊಡ್ಡ ಜಾತ್ರೆಯು ನಡೆಯಲಿದೆ.

ದೇವಾಲಯದ ದಾಸೋಹ ಭವನದಲ್ಲಿ ಜಾತ್ರೆ ಸಂಬಂಧ ಶಾಸಕ ಹರ್ಷವರ್ಧನ್‌ ನೇತೃತ್ವದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು. ಅಗತ್ಯ ಸಿದ್ಧತೆ, ರಥದ ಸುರಕ್ಷತೆ, ದಾಸೋಹ ಹಾಗೂ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಕೋವಿಡ್‌ ಕಾರಣ ಎರಡು ವರ್ಷಗಳಿಂದ ಜಾತ್ರೆಯನ್ನು ಸರಳವಾಗಿ ನಡೆಸಲಾಗಿತ್ತು. ಮಾರ್ಗಸೂಚಿ ಅನ್ವಯ ಈ ಬಾರಿ ಅದ್ಧೂರಿಯಾಗಿ ಜಾತ್ರೆ ನಡೆಯಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.