ADVERTISEMENT

ಮನೇಕಾ ಗಾಂಧಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2021, 2:28 IST
Last Updated 8 ಫೆಬ್ರುವರಿ 2021, 2:28 IST

ಮೈಸೂರು: ಸಂಸದೆಮನೇಕಾಗಾಂಧಿ ಅವರಿಗೆ ಇಲ್ಲಿನ ಒಂದನೇ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ನೋಟಿಸ್ ಜಾರಿ ಮಾಡಿದೆ.

ವಿಚಾರಣೆಯನ್ನುಮಾರ್ಚ್ 1ಕ್ಕೆ ಮುಂದೂಡಿದೆ. ಇಲ್ಲಿನ ನಿವಾಸಿ, ಭಾರತೀಯ ಪ್ರಾಣಿ ಕಲ್ಯಾಣ ಸಮಿತಿ ಸದಸ್ಯ ಡಾ.ಎಸ್.ಕೆ.ಮಿತ್ತಲ್‌ ಅವರು 2018ರಲ್ಲಿ ಈ ಪ್ರಕರಣ ದಾಖಲಿಸಿದ್ದರು.

ಅವರು ಸಮಿತಿಯ ಪರಿಶೀಲನಾ ಸಮಿತಿ ಮುಖ್ಯಸ್ಥರಾಗಿದ್ದಾಗ ಸರಿಯಾಗಿಕೆಲಸ ಮಾಡಿಲ್ಲ ಎಂದು ಆರೋಪಿಸಿ ಮನೇಕಾ ಗಾಂಧಿ ಅಂದಿನ ಕೇಂದ್ರ ಪರಿಸರ ಸಚಿವ ಡಾ.ಹರ್ಷವರ್ಧನ್ ಅವರಿಗೆ ಪತ್ರ ಬರೆದಿದ್ದರು.ಹೀಗಾಗಿ, ಮಿತ್ತಲ್ ಅವರುಕೋರ್ಟ್‌ ಮೊರೆ ಹೋಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.