ಮೈಸೂರು: ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಕೇವಲ ಎರಡು ಸ್ತಬ್ಧಚಿತ್ರಗಳನ್ನು ಬಳಸಲಾಗುತ್ತಿದೆ. ಈ ಸಂಬಂಧ ಸಿದ್ಧತೆಯು ವಸ್ತುಪ್ರದರ್ಶನ ಆವರಣದಲ್ಲಿ ನಡೆದಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮೈಸೂರು ಅರಮನೆಯ ವೈಭವ ತೋರಿಸುವ ಸ್ತಬ್ಧಚಿತ್ರ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಕೋವಿಡ್–19ಗೆ ಸಂಬಂಧಿಸಿದ ಸ್ತಬ್ಧಚಿತ್ರ ಸಿದ್ಧಪಡಿಸಲಾಗುತ್ತಿದೆ. ಕೋವಿಡ್ ವಾರಿಯರ್ಗಳ ಸಾಧನೆಯನ್ನು ಪ್ರತಿಬಿಂಬಿಸಲಾಗುತ್ತಿದೆ. ಅಲ್ಲದೇ, ಸಾರ್ವಜನಿಕರಲ್ಲಿ ಕೋವಿಡ್ ಸಂಬಂಧ ಜಾಗೃತಿ ಮೂಡಿಸಲಾಗುತ್ತಿದೆ.
ಈ ಬಾರಿ ಮೆರವಣಿಗೆಯು ಅರಮನೆ ಆವರಣದಲ್ಲಿ ಕೇವಲ 300 ಮೀಟರ್ ಅಂತರದೊಳಗೆ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.