ಮೈಸೂರು: ‘ಮೈಸೂರು–ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೂ ಗೆಲುವಿನ ಅವಕಾಶವಿದೆ’ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಸೋಮವಾರ ಇಲ್ಲಿ ತಿಳಿಸಿದರು.
‘ಸಿ.ಬಸವೇಗೌಡಗೆ ಟಿಕೆಟ್ ಕೊಡುವಂತೆ ಯಾರಿಗೆ ಕೇಳಬೇಕು ಅವರನ್ನು ಕೇಳುವೆ. ಯಾರನ್ನು ಕೇಳುವೆ ಎಂಬುದು ಗೋಪ್ಯ. ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳೇ ಪ್ರಾಬಲ್ಯ ಮೆರೆದಿದ್ದಾರೆ. ಹಿಂದಿನಂತೆಯೇ ಕಾಂಗ್ರೆಸ್ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಬಹುದು. ಜೆಡಿಎಸ್ ಪ್ರಾಬಲ್ಯ ತಗ್ಗಿದ್ದು, ಬಿಜೆಪಿ ತನ್ನ ವರ್ಚಸ್ಸು ಹೆಚ್ಚಿಸಿಕೊಂಡಿದೆ. ಹಿಂದಿನ ಬಾರಿ ಸೋಲಾಗಿತ್ತು. ಈ ಬಾರಿ ಗೆಲುವಿನ ಅವಕಾಶವಿದೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.