ADVERTISEMENT

ಬಿಜೆಪಿಗೂ ಅವಕಾಶ; ಸಿ.ಬಸವೇಗೌಡಗೆ ಟಿಕೆಟ್‌ ನೀಡಲು ಕೇಳುವೆ: ಶ್ರೀನಿವಾಸ ಪ್ರಸಾದ್‌

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 11:01 IST
Last Updated 25 ಅಕ್ಟೋಬರ್ 2021, 11:01 IST

ಮೈಸೂರು: ‘ಮೈಸೂರು–ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೂ ಗೆಲುವಿನ ಅವಕಾಶವಿದೆ’ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಸೋಮವಾರ ಇಲ್ಲಿ ತಿಳಿಸಿದರು.

‘ಸಿ.ಬಸವೇಗೌಡಗೆ ಟಿಕೆಟ್‌ ಕೊಡುವಂತೆ ಯಾರಿಗೆ ಕೇಳಬೇಕು ಅವರನ್ನು ಕೇಳುವೆ. ಯಾರನ್ನು ಕೇಳುವೆ ಎಂಬುದು ಗೋಪ್ಯ. ಪಕ್ಷದ ಹೈಕಮಾಂಡ್‌ ನಿರ್ಧಾರವೇ ಅಂತಿಮ’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಈ ಹಿಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳೇ ಪ್ರಾಬಲ್ಯ ಮೆರೆದಿದ್ದಾರೆ. ಹಿಂದಿನಂತೆಯೇ ಕಾಂಗ್ರೆಸ್‌ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಬಹುದು. ಜೆಡಿಎಸ್‌ ಪ್ರಾಬಲ್ಯ ತಗ್ಗಿದ್ದು, ಬಿಜೆಪಿ ತನ್ನ ವರ್ಚಸ್ಸು ಹೆಚ್ಚಿಸಿಕೊಂಡಿದೆ. ಹಿಂದಿನ ಬಾರಿ ಸೋಲಾಗಿತ್ತು. ಈ ಬಾರಿ ಗೆಲುವಿನ ಅವಕಾಶವಿದೆ’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.