ಮೈಸೂರು: ಮಿದುಳು ನಿಷ್ಕ್ರಿಯಗೊಂಡಿದ್ದ ಗುಂಡ್ಲುಪೇಟೆಯ ಎಚ್.ಆರ್.ರಾಕೇಶ್ ಅವರ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದು, ರಾಕೇಶ್ ಈ ಮೂಲಕ ಐದು ಜೀವಗಳಿಗೆ ನೆರವಾಗಿದ್ದಾರೆ.
ತಲೆತಿರುಗುವಿಕೆ ಕಾರಣದಿಂದ ಇಲ್ಲಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದ, ರಾಕೇಶ್ ಜುಲೈ 29ರಂದು ಮೆದುಳಿನ ಅಂಗಾಂಶ ವೈಫಲ್ಯಕ್ಕೆ ತುತ್ತಾಗಿದ್ದರು. ಬಳಿಕ ವೈದ್ಯರು ಪರಿಶೀಲಿಸಿ, ಮಿದುಳು ನಿಷ್ಕ್ರಿಯಗೊಂಡಿರುವುದನ್ನು ಘೋಷಿಸಿದ್ದರು. ಬಳಿಕ ಕುಟುಂಬದವರ ಒಪ್ಪಿಗೆ ಮೇರೆಗೆ, 2 ಕಿಡ್ನಿಗಳು, 1 ಲಿವರ್, ಹೃದಯದ ಕವಾಟಗಳು ಮತ್ತು ಕಾರ್ನಿಯಾಗಳನ್ನು ಪಡೆಯಲಾಯಿತು.
1 ಕಿಡ್ನಿ ಮತ್ತು ಲಿವರ್ ಅನ್ನು ಆಸ್ಪತ್ರೆಯ ರೋಗಿಗಳಿಗೆ ಕಸಿ ಮಾಡಲಾಯಿತು. 1 ಕಿಡ್ನಿಯನ್ನು ಜೆಎಸ್ಎಸ್ ಆಸ್ಪತ್ರೆಗೆ, ಕಾರ್ನಿಯಾಗಳನ್ನು ಕೆ.ಆರ್.ಆಸ್ಪತ್ರೆಗೆ ಹಾಗೂ ಹೃದಯದ ಕವಾಟಗಳನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ರವಾನಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.