ADVERTISEMENT

ಯುವ ದಸರಾ ಉದ್ಘಾಟನೆ: ಸಿಂಧೂಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2019, 20:00 IST
Last Updated 10 ಸೆಪ್ಟೆಂಬರ್ 2019, 20:00 IST
ಪಿ. ವಿ. ಸಿಂಧೂ
ಪಿ. ವಿ. ಸಿಂಧೂ   

ಬೆಂಗಳೂರು: ನಾಡಿನ ಹೆಮ್ಮೆಯ ಯುವ ದಸರಾವನ್ನು ಉದ್ಘಾಟಿಸಲು ಆಗಮಿಸಬೇಕು ಎಂದು ಬ್ಯಾಡ್ಮಿಂಟನ್‌ ವಿಶ್ವ ಚಾಂಪಿಯನ್‌
ಪಿ. ವಿ. ಸಿಂಧೂ ಅವರಿಗೆ ಸಿ.ಎಂ ಆಹ್ವಾನ ನೀಡಿದ್ದಾರೆ.

‘ಕ್ರೀಡಾ ಕ್ಷೇತ್ರದಲ್ಲಿ ನೀವು ಅತ್ಯುನ್ನತ ಸಾಧನೆ ಮಾಡಿ ಯುವಕರಿಗೆ ಪ್ರೇರಣೆಯಾಗಿದ್ದೀರಿ. ಈ ಬಾರಿ ನಡೆಯುತ್ತಿರುವ 410ನೇ ದಸರಾ ಸಮಾರಂಭದ ಯುವ ದಸರಾವನ್ನು ಉದ್ಘಾಟಿಸುವ ಮೂಲಕ ನಾವು ನೀಡುತ್ತಿರುವ ಗೌರವ ಸ್ವೀಕರಿಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT