ಮೈಸೂರು: ಭತ್ತದ ಕಟಾವು ಆರಂಭವಾಗಿದೆ. ಕೋವಿಡ್–19 ಸಂದರ್ಭದಲ್ಲಿ ರೈತರಿಗೆ ಇದು ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಆದ್ದರಿಂದ ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ ₹ 2,500ದಿಂದ ₹ 3 ಸಾವಿರ ಬಾಡಿಗೆ ಹಣ ನಿಗದಿ ಪಡಿಸುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಆದ್ದರಿಂದ ಭತ್ತ ಕಟಾವು ಯಂತ್ರದ ಬಾಡಿಗೆ ದರವನ್ನು ಇಲಾಖೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ ಎಂದಿದ್ದಾರೆ.
ಕೋವಿಡ್-19 ಸೋಂಕಿನ ಸಂಕಷ್ಟದ ಸಂದರ್ಭದಲ್ಲಿ ಚೈನ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ₹ 2,300, ಟೈರ್ ಟೈಪ್ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ₹ 1,500 ಮೀರದಂತೆ ಬಾಡಿಗೆ ನಿಗದಿ ಮಾಡಬೇಕು. ಇದು ತಪ್ಪಿದಲ್ಲಿ ಭತ್ತ ಕಟಾವು ಯಂತ್ರದ ಮಾಲೀಕರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಎಂ.ಮಹಾಂತೇಶಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.