ADVERTISEMENT

ಪಿರಿಯಾಪಟ್ಟಣ | ಟಿಬೆಟನ್ ನಿರಾಶ್ರಿತರ ಜಮೀನಿನಲ್ಲಿ ಬೆಳದಿದ್ದ ಶುಂಠಿ ಕಳವು

​ಪ್ರಜಾವಾಣಿ ವಾರ್ತೆ
Published 29 ಜುಲೈ 2023, 14:12 IST
Last Updated 29 ಜುಲೈ 2023, 14:12 IST
ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಮದಲ್ಲಿನ ಟಿಬೆಟನ್ ನಿರಾಶ್ರಿತರ ಶಿಬಿರದಲ್ಲಿ ರೈತರು ಬೆಳೆದಿದ್ದ ಶುಂಠಿ ಬೆಳೆಯನ್ನು ರಾತ್ರಿ ವೇಳೆ ಕಳ್ಳತನ ಮಾಡಿರುವುದು
ಪಿರಿಯಾಪಟ್ಟಣ ತಾಲ್ಲೂಕಿನ ಬೈಲಕುಪ್ಪೆ ಗ್ರಾಮದಲ್ಲಿನ ಟಿಬೆಟನ್ ನಿರಾಶ್ರಿತರ ಶಿಬಿರದಲ್ಲಿ ರೈತರು ಬೆಳೆದಿದ್ದ ಶುಂಠಿ ಬೆಳೆಯನ್ನು ರಾತ್ರಿ ವೇಳೆ ಕಳ್ಳತನ ಮಾಡಿರುವುದು   

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲಕುಪ್ಪೆ ಟಿಬೆಟನ್ ನಿರಾಶ್ರಿತರ ಜಮೀನಿನಲ್ಲಿ ಬೆಳೆದಿದ್ದ ಸುಮಾರು 8 ಮೂಟೆಯಷ್ಟು ಶುಂಠಿ ಶುಕ್ರವಾರ ರಾತ್ರಿ ಕಳ್ಳತನ ಮಾಡಿದ್ದಾರೆ.

ಟಿಬೆಟನ್ ರೈತನ ಲಾಖ್ ಪಾ ಸೇರಿಂಗ್ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ₹ 80 ಸಾವಿರ ಬೆಲೆಯ ಶುಂಠಿಯನ್ನು ಕಳ್ಳರು ಕಿತ್ತುಕೊಂಡು ಕದ್ದೊಯ್ದಿದ್ದಾರೆ ಎಂದು ಬೈಲಕುಪ್ಪೆ ಪೊಲೀಸ್ ಠಾಣೆಗೆ ಜಮೀನು ಮಾಲೀಕ ದೂರು ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.