ಮೈಸೂರು: ಮೈಸೂರನ್ನು ಪ್ಯಾರಿಸ್ ಮಾಡುವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿರಲಿಲ್ಲ. ಅವರ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ಬಾರಿ ನರೇಂದ್ರ ಮೋದಿ ಅವರು ಇಲ್ಲಿಗೆ ಬಂದಿದ್ದಾಗ ಮೈಸೂರನ್ನು ಪ್ಯಾರಿಸ್ ಮಾಡುವೆ ಎಂದಿರಲಿಲ್ಲ. ಆಗ ವಿಶ್ವದ ಅತಿ ಹೆಚ್ಚು ಪ್ರವಾಸಿಗರನ್ನು ಪ್ಯಾರಿಸ್ ಸೆಳೆಯುತ್ತಿತ್ತು. ಅದೇ ತರಹ ಮೈಸೂರಿಗೆ ಪ್ರವಾಸಿಗಳನ್ನು ಸೆಳೆಯುವ ಶಕ್ತಿ ಇದೆ ಎಂದಿದ್ದರು. ಅದಕ್ಕಾಗಿ ವಿಮಾನಯಾನ ಸೌಲಭ್ಯ ಸೇರಿದಂತೆ ಹಲವು ಕೊಡುಗೆಗಳನ್ನು ಮೈಸೂರಿಗೆ ನೀಡಿದ್ದಾರೆ’ ಎಂದು ಹೇಳಿದರು.
ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಲು ಮೋದಿ ಅವರು ಜೂನ್ 21ರಂದು ನಗರಕ್ಕೆ ಆಗಮಿಸುವುದು ಬಹುತೇಕ ಖಚಿತ ಎಂದು ಎಸ್.ಟಿ.ಸೋಮಶೇಖರ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.