ಮೈಸೂರು: ಇಲ್ಲಿನ ಹುತಾತ್ಮರ ಸ್ಮಾರಕ ಉದ್ಯಾನದಲ್ಲಿ ಜಿಲ್ಲಾ, ನಗರ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ಗುರುವಾರ ನಡೆಯಿತು.ಹುತಾತ್ಮರ ಗೌರವಾರ್ಥ ಮೂರು ಸುತ್ತು ವಾಲಿ ಫೈರಿಂಗ್ ನಡೆಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶ ಎಂ.ಎಲ್.ರಘುನಾಥ್, ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ವಿಫುಲ್ ಕುಮಾರ್, ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಸೇರಿದಂತೆ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಇರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.