ADVERTISEMENT

ಮೈಸೂರು: ದೇಶದ್ರೋಹದ ಪ್ರಕರಣ ದಾಖಲಿಸಲು ಆಗ್ರಹಿಸಿ ಪತ್ರ ಚಳವಳಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 13:04 IST
Last Updated 26 ಸೆಪ್ಟೆಂಬರ್ 2020, 13:04 IST
ಮಾದಕ ವಸ್ತು ಜಾಲದಲ್ಲಿ ಸಿಲುಕಿದವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶನಿವಾರ ಮೈಸೂರಿನ ಮುಖ್ಯ ಅಂಚೆ ಕಚೇರಿಯ ಮುಂದೆ ಪತ್ರ ಚಳುವಳಿ ನಡೆಸಿದರು
ಮಾದಕ ವಸ್ತು ಜಾಲದಲ್ಲಿ ಸಿಲುಕಿದವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶನಿವಾರ ಮೈಸೂರಿನ ಮುಖ್ಯ ಅಂಚೆ ಕಚೇರಿಯ ಮುಂದೆ ಪತ್ರ ಚಳುವಳಿ ನಡೆಸಿದರು   

ಮೈಸೂರು: ಮಾದಕವಸ್ತು ಜಾಲದಲ್ಲಿ ಭಾಗಿಯಾಗಿರುವವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಶನಿವಾರ ಇಲ್ಲಿನ ಪ್ರಧಾನ ಅಂಚೆ ಕಚೇರಿಯ ಮುಂದೆ ಪತ್ರ ಚಳವಳಿ ನಡೆಯಿತು.

ಸರ್ಕಾರ ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿಯಬಾರದು. ಎಷ್ಟೇ ಪ್ರಭಾವಿಗಳಿದ್ದರೂ ಅವರ ಮೇಲೆ ಪ್ರಕರಣ ದಾಖಲಿಸಬೇಕು. ಈ ದಂಧೆಯನ್ನು ಮಟ್ಟಹಾಕಲು ಅತ್ಯಂತ ಪ್ರಬಲ ಕಾನೂನು ರೂಪಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

ನಗರ ಸಂಘಟನಾ ಕಾರ್ಯದರ್ಶಿ ಶರತ್, ನಗರ ಸಹ ಕಾರ್ಯದರ್ಶಿಗಳಾದ ಚಿರಂತ್, ಪ್ರಜ್ಞಾ, ಕಾರ್ಯಕರ್ತರಾದ ನಾಗಶ್ರೀ, ರಚನಾ, ಸುಹಾಸ್, ಆದರ್ಶ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.