ADVERTISEMENT

ರಸ್ತೆ ಗುಂಡಿ; ಮುಖ್ಯಮಂತ್ರಿ ಅಂಗಳಕ್ಕೆ!

​ಪ್ರಜಾವಾಣಿ ವಾರ್ತೆ
Published 24 ಮೇ 2022, 19:08 IST
Last Updated 24 ಮೇ 2022, 19:08 IST

ಮೈಸೂರು:‘ಮೈಸೂರು ನಗರದಲ್ಲಿನ ರಸ್ತೆ ಗುಂಡಿಗಳ ವಿಷಯವನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗಿದೆ’ ಎಂದು ಉಸ್ತುವಾರಿ ಸಚಿವಎಸ್.ಟಿ.ಸೋಮಶೇಖರ್ ಇಲ್ಲಿ ಮಂಗಳವಾರ ತಿ‌ಳಿಸಿದರು.

ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ನಗರಕ್ಕೆ ಬರಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಸ್ತೆ ಗುಂಡಿಗಳೇ ಸ್ವಾಗತ ಕೋರುತ್ತಿವೆಯೆಲ್ಲ ಎಂಬ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಈ ರೀತಿ ಪ್ರತಿಕ್ರಿಯಿಸಿದರು.

‘ಮೇ 28 ಇಲ್ಲವೇ 29ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿಗೆ ಬಂದು ಈ ಸಂಬಂಧ ಸಭೆ ನಡೆಸುವ ಸಾಧ್ಯತೆ ಇದೆ. ಆಗಲೂ ಮತ್ತೊಮ್ಮೆ ಪ್ರಸ್ತಾಪಿಸಲಾಗುವುದು’ ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.