ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ‘ಭಾರತ್ ಜೋಡೊ’ ಪಾದಯಾತ್ರೆಯಲ್ಲಿ ಬಹು ಭಾಷಾ ನಟ ಪ್ರಕಾಶ್ ರಾಜ್, ಖ್ಯಾತ ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ–ಸೇನಾನಿ ಭಾಗವಹಿಸಲಿದ್ದಾರೆ.
‘ಮೈಸೂರಿನಿಂದ ಮಂಡ್ಯ ಜಿಲ್ಲೆಯವರೆಗೆ ಸೋಮವಾರ ನಡೆದ ಪಾದಯಾತ್ರೆಯಲ್ಲಿ ಅವರು ಪಾಲ್ಗೊಳ್ಳಬೇಕಿತ್ತು. ಆದರೆ, ಪ್ರಕಾಶ್ ರಾಜ್ ಅವರಿಗೆ ಹೈದರಾಬಾದ್ನಿಂದ ವಿಮಾನ ಲಭ್ಯವಾಗದಿದ್ದರಿಂದ ಕಾರ್ಯಕ್ರಮವು ಕೊನೆ ಕ್ಷಣದಲ್ಲಿ ರದ್ದಾಯಿತು. ಈ ಮೂವರೂ, ಯಾತ್ರೆಯಲ್ಲಿ ಮತ್ತೊಂದು ದಿನ ಭಾಗವಹಿಸಲಿದ್ದಾರೆ’ ಎಂದು ವಿಶ್ವಸನೀಯ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.