ADVERTISEMENT

ಮೈಸೂರು ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ವರ್ಗಾವಣೆ: ಡಿಸಿಗೆ ಜಿಪಂ ಹೊಣೆ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2020, 9:44 IST
Last Updated 22 ಆಗಸ್ಟ್ 2020, 9:44 IST
ಪ್ರಶಾಂತ್ ಕುಮಾರ್ ಮಿಶ್ರಾ
ಪ್ರಶಾಂತ್ ಕುಮಾರ್ ಮಿಶ್ರಾ   
""

ಮೈಸೂರು: ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾಯಿಸಿರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಂಜನಗೂಡು ಪ್ರಭಾರ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಇಒ ವರ್ಗಾಯಿಸುವಂತೆ ವೈದ್ಯ ಸಮೂಹ ರಾಜ್ಯ ಸರ್ಕಾರದ ವಿರುದ್ಧ ಒತ್ತಡ ಹಾಕಿತ್ತು.

ಕರ್ತವ್ಯದಿಂದ ದೂರ ಉಳಿದು ಪ್ರತಿಭಟನೆ ನಡೆಸಿತ್ತು. ಇದೀಗ ಜಿ.ಪಂ. ಸಿಇಒ ವರ್ಗಾಯಿಸಿರುವ ರಾಜ್ಯ ಸರ್ಕಾರವುಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರಿಗೆ ಸಿಇಒ ಉಸ್ತುವಾರಿ ಹೊಣೆ ವಹಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.