ಹುಣಸೂರು (ಮೈಸೂರು): ತಂಬಾಕು ಬೆಳೆಯನ್ನು 2020ಕ್ಕೆ ನಿಷೇಧಿಸುವ ವಿಶ್ವ ಆರೋಗ್ಯ ಸಂಸ್ಥೆಯ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ ಎಂದು ಸಂಸದ ಪ್ರತಾಪಸಿಂಹ ಸೋಮವಾರ ಹೇಳಿದರು.
ತಾಲ್ಲೂಕಿನ ಹೆಗ್ಗಂದೂರು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದು ತಂಬಾಕು ಬೆಳೆಗಾರರ ಪರವಾಗಿ ಸರ್ಕಾರ ನಿಂತಿದೆ ಎಂದು ತಿಳಿಸಿದರು.
ಯುಪಿಎ ಸರ್ಕಾರ ಮಾಡಿಕೊಂಡಿದ್ದ ಒಡಂಬಡಿಕೆಯಿಂದ ದಕ್ಷಿಣ ಭಾರತದಲ್ಲಿ ತಂಬಾಕು ಬೆಳೆಯುವ ಸಾವಿರಾರು ರೈತರು ತೊಂದರೆ ಎದುರಿಸುವ ಭೀತಿಯಲ್ಲಿದ್ದರು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ನಿಷೇಧಿಸುವ ಪ್ರಸ್ತಾವ ಮುಂದಿಟ್ಟಿತ್ತು. 2020ಕ್ಕೆ ತಂಬಾಕು ಬೆಳೆ ಬೆಳೆಯುವುದನ್ನು ಅಂತ್ಯಗೊಳಿಸಲು ಸೂಚನೆ ನೀಡಿತ್ತು. ಆದರೆ, ಇದನ್ನು ಧಿಕ್ಕರಿಸಿದ್ದ ಬ್ರೆಜಿಲ್, ದಕ್ಷಿಣ ಆಫ್ರಿಕಾ, ಚೀನಾದಂತಹ ರಾಷ್ಟ್ರಗಳು ತಂಬಾಕು ಉತ್ಪಾದನೆಯನ್ನು ಮುಂದುವರೆಸಿವೆ. ಆದರೆ, ಭಾರತಕ್ಕೆ ಏಕೆ ನಿಯಂತ್ರಣ ಹೇರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದಿದ್ದಾರೆ ಎಂದು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.