ಮೈಸೂರು: ಆರ್.ಧ್ರುವನಾರಾಯಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಿಜೆಪಿ ಸಂಸದ ಪ್ರತಾಪ ಸಿಂಹ ಬಿಕ್ಕಿ ಬಿಕ್ಕಿ ಅತ್ತರು.
‘ಸುದ್ದಿ ಕೇಳಿ ಆಘಾತವಾಯಿತು. ಪಕ್ಷ, ರಾಜಕಾರಣ ಬೇರೆ ಇರಬಹುದು. ಆದರೆ, ಅವರ ವ್ಯಕ್ತಿತ್ವ ಎಲ್ಲರ ಮನಸ್ಸನ್ನೂ ಗೆಲ್ಲುವಂತಹದ್ದು. ನಾನು ಮೊದಲ ಬಾರಿ ಸಂಸದನಾಗಿ ಆಯ್ಕೆಯಾದಾಗ ಅನುಭವವಿರಲಿಲ್ಲ. ಹೇಗೆ ಸಭೆ ನಡೆಸಬೇಕು, ಫೈಲ್ ಫಾಲೋಅಪ್ ಹೇಗೆ ಮಾಡಬೇಕು, ಯೋಜನೆಗಳನ್ನ ಯಾವ ರೀತಿ ತರಬೇಕೆಂದು ಮಾರ್ಗದರ್ಶನ ನೀಡಿದ್ದರು’ ಎಂದು ನೆನೆದರು.
‘ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಇತ್ತೀಚೆಗೆ ಬೆನ್ನು ತಟ್ಟಿದ್ದರು. ಚಾಮರಾಜನಗರ ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಗುಂಡ್ಲುಪೇಟೆ-ಕೇರಳ ಹೆದ್ದಾರಿ ಅವರದ್ದೇ ಕೊಡುಗೆ. ಸದಾ ಜನರ ಬಗ್ಗೆಯೇ ಯೋಚಿಸುತ್ತಿದ್ದರು. ಒಳ್ಳೆಯ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ’ ಎಂದು ಕಂಬನಿ ಮಿಡಿದರು.
ಇವುಗಳನ್ನೂ ಓದಿ..
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.