ಮೈಸೂರು: ತಾಲ್ಲೂಕಿನ ರಮ್ಮನಹಳ್ಳಿಯಲ್ಲಿದ್ದ ಮದ್ಯದಂಗಡಿಯನ್ನು ಮುಚ್ಚಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.
ಕಳೆದ ಹಲವು ತಿಂಗಳುಗಳಿಂದ ಈ ಮದ್ಯದಂಗಡಿಯನ್ನು ಮುಚ್ಚಿಸಲಾಗಿತ್ತು. ಆದರೆ, ಮತ್ತೆ ಅಂಗಡಿ ತೆರೆದಿದ್ದನ್ನು ಕಂಡ ಗ್ರಾಮಸ್ಥರು ಅಂಗಡಿಯ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಮದ್ಯದಂಗಡಿಯಿಂದ ಊರಿನಲ್ಲಿ ಗಲಾಟೆಗಳು ಹೆಚ್ಚಾಗುತ್ತವೆ. ಸದ್ಯ, ಹಲವು ದಿನಗಳಿಂದ ಮದ್ಯದಂಗಡಿ ಮುಚ್ಚಿದ್ದರಿಂದ ಶಾಂತಿ ನೆಲೆಸಿತ್ತು. ಈಗ ಆ ಶಾಂತಿಯನ್ನು ಕದಡಲು ಬಿಡುವುದಿಲ್ಲ ಎಂದು ಗ್ರಾಮಸ್ಥರೊಬ್ಬರು ತಿಳಿಸಿದರು.
ಸ್ಥಳಕ್ಕೆ ಬಂದ ಪೊಲೀಸರು ತಾತ್ಕಾಲಿಕವಾಗಿ ಮದ್ಯದಂಗಡಿಯನ್ನು ಮುಚ್ಚಿಸಿ ವಿಷಯವನ್ನು ಅಬಕಾರಿ ಇಲಾಖೆಯವರಿಗೆ ಮುಟ್ಟಿಸಿದರು. ಸದ್ಯ, ಅಬಕಾರಿ ಇಲಾಖೆಯವರು ಪ್ರಕರಣವನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.