ADVERTISEMENT

ಮೈಸೂರು: ರಸ್ತೆ ಗುಂಡಿ ಮುಚ್ಚಲು ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2022, 8:25 IST
Last Updated 24 ಜನವರಿ 2022, 8:25 IST
   

ಮೈಸೂರು: ಇಲ್ಲಿನ ಕೃಷ್ಣಮೂರ್ತಿಪುರಂನ ಶ್ರೀರಾಮಮಂದಿರದ ಸಮೀಪ ಭಾನುವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಅಪಘಾತದಿಂದ ಗಂಗೋತ್ರಿ ಬಡಾವಣೆ ನಿವಾಸಿ ದರ್ಶನ್ ಕುಮಾರ್(30) ಮೃತಪಟ್ಟರು.

ಅಪಘಾತಕ್ಕೆ ರಸ್ತೆಗುಂಡಿಗಳೇ ಕಾರಣ ಎಂದು ಆರೋಪಿಸಿದ ಮೈಸೂರು ಪ್ರಜ್ಞಾವಂತರ ವೇದಿಕೆಯ ಕಾರ್ಯಕರ್ತರು ಸೋಮವಾರ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಬಹುತೇಕ ಎಲ್ಲಾ ರಸ್ತೆಗಳಲ್ಲೂ ಗುಂಡಿಗಳಿದ್ದು, ಇವುಗಳಿಂದ ನಿತ್ಯ ಅಪಘಾತಗಳು ಸಂಭವಿಸುತ್ತಿವೆ. ಕೂಡಲೇ ಗುಂಡಿ ಮುಚ್ಚುವ ಕೆಲಸ ಆಗಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.