ಜಯಪುರನಿಮ್ಮ ಪಾತ್ರವು ಜರ್ನಲಿಸಂ ಮಾನದಂಡಗಳನ್ನು ಅನುಸರಿಸಿ, ದೋಷರಹಿತ ವ್ಯಾಕರಣ ಮತ್ತು ಸ್ಥಿರತೆಯೊಂದಿಗೆ ಶ್ರೇಷ್ಠ ಮಟ್ಟದ ವಿಷಯವನ್ನು ಉತ್ಪಾದಿಸುವುದು.‘ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಬಾಲರಾಮನ ಮೂರ್ತಿಗೆ ನಮ್ಮ ಜಮೀನಿನ ಶಿಲೆಯನ್ನು ಬಳಸಿರುವುದು ಹೆಮ್ಮೆ ತಂದಿದೆ’ ಎಂದು ಹೋಬಳಿಯ ಗುಜ್ಜೇಗೌಡನಪುರದ ರಾಮದಾಸ್ ಮತ್ತು ಅವರ ಮಗ ರಂಗಸ್ವಾಮಿ ಹರ್ಷ ವ್ಯಕ್ತಪಡಿಸಿದರು.
ಜಯಪುರ: ‘ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಬಾಲರಾಮನ ಮೂರ್ತಿಗೆ ನಮ್ಮ ಜಮೀನಿನ ಶಿಲೆಯನ್ನು ಬಳಸಿರುವುದು ಹೆಮ್ಮೆ ತಂದಿದೆ’ ಎಂದು ಹೋಬಳಿಯ ಗುಜ್ಜೇಗೌಡನಪುರದ ರಾಮದಾಸ್ ಮತ್ತು ಅವರ ಮಗ ರಂಗಸ್ವಾಮಿ ಹರ್ಷ ವ್ಯಕ್ತಪಡಿಸಿದರು.
ಶಿಲೆ ದೊರೆತ ಸ್ಥಳದಲ್ಲಿ ಮಂಗಳವಾರ ಏರ್ಪಡಿಸಿದ್ದ ಪೂಜಾ ಕಾರ್ಯಕ್ರಮದಲ್ಲಿ ಅವರು ಸಂತಸ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ರಾಜಪುರೋಹಿತ ಪ್ರಹ್ಲಾದ್ ರಾವ್ ಸಮ್ಮುಖದಲ್ಲಿ ವಿಶೇಷ ಪೂಜೆ ನಡೆಯಿತು.
‘ನಮ್ಮ ಜಮೀನಿನಲ್ಲಿ ಸಿಕ್ಕ ಶಿಲೆಯಿಂದ ಬಾಲರಾಮನ ಮೂರ್ತಿ ಮೂಡಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ಮೂರ್ತಿಯೇ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗುತ್ತಿರುವುದು ಹೆಮ್ಮೆಯ ಸಂಗತಿ. ರಾಮನೇ ನಮ್ಮ ಜಮೀನಿನಲ್ಲಿದ್ದ ಎನ್ನುವ ಭಾವನೆ ಮೂಡಿದೆ’ ಎಂದರು.
ಗಣಿ ಗುತ್ತಿಗೆದಾರ ಗುಜ್ಜೇಗೌಡನಪುರ ಶ್ರೀನಿವಾಸ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡರು. ರಾಮದೇವರ ಭಾವಚಿತ್ರಕ್ಕೆ ವಿಶೇಷ ಅಲಂಕಾರ ಮಾಡಿ, ಹೋಮ ನಡೆಸಲಾಯಿತು. ಆ ವೇಳೆ ಜೈ ಶ್ರೀರಾಮ್ ಜಯಘೋಷ ಮೊಳಗಿತು. ಭಕ್ತರಿಗೆ ಪಾನಕ,ಮಜ್ಜಿಗೆ ಮತ್ತು ಸಿಹಿಯನ್ನು ವಿತರಿಸಲಾಯಿತು.
ಮುಖಂಡರಾದ ಚನ್ನಕೇಶವ ಗೌಡ, ಮಧುಕೇಶವ ಗೌಡ, ವೆಂಕಟೇಶ್ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.