ಮೈಸೂರು:ರಾಜಸ್ಥಾನದ ನಿರಾಶ್ರಿತರಿಗೆ ಜೈನ್ ಸಮುದಾಯದ ವತಿಯಿಂದ ಮೈಸೂರಿನ ಸಿದ್ಧಾರ್ಥ ಬಡಾವಣೆಯಲ್ಲಿ ಪರಿಹಾರ ಕೇಂದ್ರ ತೆಗೆಯಲಾಗಿದೆ. ಇಲ್ಲಿಯೇ ಅವರಿಗೆ ಉಟೋಪಚಾರ ವ್ಯವಸ್ಥೆ ಮಾಡಲಾಗಿದೆ.
ಸುಮಾರು 162 ನಿರಾಶ್ರಿತರು ಇಲ್ಲಿದ್ದಾರೆ.
ಮೈಸೂರಿನಲ್ಲಿದ್ದ ಇವರು ಮಹಾರಾಷ್ಟ್ರ ಗಡಿ ಮೂಲಕ ರಾಜಸ್ಥಾನಕ್ಕೆ ತೆರಳಲು ಮುಂದಾಗಿದ್ದರು. ಮಹಾರಾಷ್ಟ್ರ ಗಡಿಯಲ್ಲಿ ಅವರನ್ನು ತಡೆಹಿಡಿದು ವಾಪಸ್ ಕಳಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪಸಿಂಹ ಗುರುವಾರ ಭೇಟಿ ನೀಡಿ ನಿರಾಶ್ರಿತರ ಯೋಗ ಕ್ಷೇಮ ವಿಚಾರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.