ADVERTISEMENT

ಸಿದ್ದರಾಮನಹುಂಡಿಯಲ್ಲಿ ರಾಮಮಂದಿರ ಉದ್ಘಾಟನೆ

ಗ್ರಾಮಸ್ಥರ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 11:55 IST
Last Updated 19 ಏಪ್ರಿಲ್ 2021, 11:55 IST
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಗ್ರಾಮ ಸಿದ್ದರಾಮನ ಹುಂಡಿಯನ್ನು ಜೀರ್ಣೋದ್ದಾರಗೊಂಡ ಕೋದಂಡರಾಮಮಂದಿರದಲ್ಲಿ ವಿಗ್ರಹಗಳನ್ನು ಸೋಮವಾರ ಪ್ರತಿಷ್ಠಾಪಿಸಲಾಯಿತು
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಗ್ರಾಮ ಸಿದ್ದರಾಮನ ಹುಂಡಿಯನ್ನು ಜೀರ್ಣೋದ್ದಾರಗೊಂಡ ಕೋದಂಡರಾಮಮಂದಿರದಲ್ಲಿ ವಿಗ್ರಹಗಳನ್ನು ಸೋಮವಾರ ಪ್ರತಿಷ್ಠಾಪಿಸಲಾಯಿತು   

ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಸೋಮವಾರ ‘ಕೋದಂಡರಾಮ ಮಂದಿರ’ ಭಕ್ತರ ಪ್ರವೇಶಕ್ಕೆ ಮುಕ್ತವಾಯಿತು.

ಕೋವಿಡ್‌ ಹೆಚ್ಚುತ್ತಿರುವ ಕಾರಣ ವೇದಿಕೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡದೇ ಕೇವಲ ಧಾರ್ಮಿಕ ವಿಧಿವಿಧಾನಗಳಿಗಷ್ಟೇ ಸೀಮಿತವಾಗಿ ಅತ್ಯಂತ ಸರಳವಾಗಿ ಉದ್ಘಾಟನಾ ಕಾರ್ಯ ನೆರವೇರಿಸಲಾಯಿತು. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ ಇದರಲ್ಲಿ ಭಾಗಿಯಾದರು.

ಗಣಪತಿ ಹೋಮ ಮತ್ತು ಮಹಾಚಂಡಿಕಾ ಯಾಗಗಳು ನಡೆದವು. ದೇಗುಲದ ಮೇಲಿನ ಕಳಸ ಹಾಗೂ ಗರ್ಭಗುಡಿಯಲ್ಲಿನ ಮೂರ್ತಿಗಳನ್ನು ಪುನರ್‌ ಸ್ಥಾಪಿಸಲಾಯಿತು. ದೇವಸ್ಥಾನದ ಒಳಾಂಗಣದಲ್ಲಿ ವಿಷ್ಣುವಿನ ದಶಾವತಾರದ ಮೂರ್ತಿಗಳನ್ನಿಟ್ಟಿರುವುದು ವಿಶೇಷ. ಇದಕ್ಕಾಗಿ ತಮಿಳುನಾಡಿನಿಂದ ಶಿಲ್ಪಿಗಳನ್ನು ಇಲ್ಲಿಗೆ ಕರೆಸಲಾಗಿತ್ತು.

ADVERTISEMENT

ಸುಮಾರು ನೂರು ವರ್ಷದಷ್ಟು ಹಳೆಯದಾದ ಈ ಮಂದಿರವನ್ನು ಸಿದ್ದರಾಮಯ್ಯ ಅವರ ಕುಟುಂಬದವರು ಗ್ರಾಮಸ್ಥರೊಂದಿಗೆ ಸೇರಿ ಈಚೆಗೆ ಜೀರ್ಣೋದ್ಧಾರ ಮಾಡಿದ್ದರು. ಸಿದ್ದರಾಮಯ್ಯ ಅವರು ಬಂದರೆ ಜನರು ಹೆಚ್ಚು ಸೇರಬಹುದು ಎಂಬ ಕಾರಣಕ್ಕೆ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.