ಮೈಸೂರು: ಅನರ್ಹ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಮಹೇಶ ಕುಮಟಳ್ಳಿ ಶುಕ್ರವಾರ ಮುಂಜಾನೆ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
ತಾಯಿಯ ದರ್ಶನದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಾರಕಿಹೊಳಿ, ದೇವಿ ದರ್ಶನ ಪಡೆದಿದ್ದೇನೆ. ದೇಗುಲದಲ್ಲಿ ರಾಜಕೀಯ ಮಾತನಾಡೋರು ಮೂರ್ಖರು. ಸುಪ್ರೀಂಕೋರ್ಟ್ ತೀರ್ಪು ನಮ್ಮ ಪರ ಬರುವ ವಿಶ್ವಾಸವಿದೆ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.