ಮೈಸೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ನಗರದ ನಜರ್ಬಾದ್ನಲ್ಲಿರುವ ಪ್ರಧಾನ ಆದಾಯ ತೆರಿಗೆ ಆಯುಕ್ತರ ಕಚೇರಿಗೆ ಮಂಗಳವಾರ ಹಾಜರಾದರು.
ಹೈದರಾಬಾದ್ನಲ್ಲಿ ಸಿನಿಮಾವೊಂದರ ಪ್ರಚಾರ ಕಾರ್ಯಕ್ರಮದಲ್ಲಿದ್ದ ರಶ್ಮಿಕಾ ಅವರಿಗೆ ವಿಚಾರಣೆಗೆ ಬರಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸೂಚಿಸಿದ್ದರು. ಹೀಗಾಗಿ, ಅವರು ಹೈದರಬಾದ್ನಿಂದ ಬೆಳಗಾವಿ, ಬೆಳಗಾವಿಯಿಂದ ವಿಮಾನದ ಮೂಲಕ ಮೈಸೂರು ತಲುಪಿದರು ಎನ್ನಲಾಗಿದೆ.
ಇಲ್ಲಿ ಇವರು 9 ಮಂದಿಯೊಂದಿಗೆ 2 ಬ್ಯಾಗ್ಗಳು ಮತ್ತು ಒಂದು ಕಿಟ್ನಲ್ಲಿ ದಾಖಲಾತಿಗಳನ್ನು ತೆಗೆದುಕೊಂಡು ಕಚೇರಿ ಪ್ರವೇಶಿಸಿದ್ದಾರೆ.
ಇದಕ್ಕೂ ಮುನ್ನ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ರಶ್ಮಿಕಾ ಮಂದಣ್ಣ ಅವರ ತಂದೆ ಮದನ್ ಮಂದಣ್ಣ, ‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕೆಲವೊಂದು ದಾಖಲಾತಿಗಳನ್ನು ಕೇಳಿದ್ದಾರೆ. ಅವರಿಗೆ ಕೊಡಲು ಬಂದಿದ್ದೇವೆ. ಇಷ್ಟು ಬಿಟ್ಟು ಬೇರಿನ್ನೇನು ಗೊತ್ತಿಲ್ಲ’ ಎಂದು ತಿಳಿಸಿದ್ದಾರೆ.
ಶುಕ್ರವಾರವಷ್ಟೇ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಮಂಗಳವಾರ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.