ಮೈಸೂರು: ನಗರದ ಸಿಗ್ಮಾ ಆಸ್ಪತ್ರೆಯಲ್ಲಿ ಗಣರಾಜ್ಯೋತ್ಸವವನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಸ್.ಜ್ಞಾನಶಂಕರ್ ಮಾತನಾಡಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮಹತ್ವವನ್ನು ತಿಳಿಸಿಕೊಟ್ಟರು.
ಡಾ.ರಾಜೇಶ್ವರಿ ಮಾದಪ್ಪ, ಡಾ.ಸೋಮಣ್ಣ, ಡಾ.ಅಜಯ್, ಡಾ.ಅನಿಕೇತ್ ಪ್ರಭಾಕರ್, ಡಾ.ಗೌರಿ ಎಸ್.ಹುಕ್ಕೇರಿ ಹಾಗೂ ಸಿಗ್ಮಾ ಆಸ್ಪತ್ರೆಯ ಕಾಲೇಜು ಪ್ರಾಂಶುಪಾಲರಾದ ಮಂಜುನಾಥ್ ಮತ್ತು ಶುಶ್ರುತ ದಮಯಂತಿ ಇದ್ದರು.
ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.