ADVERTISEMENT

ಸಿದ್ದರಾಮಯ್ಯ ತಮ್ಮ ಸ್ಥಾನ ಉಳಿಸಿಕೊಳ್ಳಲಿ: ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 9:15 IST
Last Updated 10 ನವೆಂಬರ್ 2020, 9:15 IST
ಸೋಮಶೇಖರ್
ಸೋಮಶೇಖರ್   

ಮೈಸೂರು: ‘ಸಿದ್ದರಾಮಯ್ಯ ಅವರು ಮೊದಲು ತಮ್ಮ ಸ್ಥಾನವನ್ನು ಉಳಿಸಿ ಕೊಳ್ಳಲಿ. ಆ ಬಳಿಕ ಬಿಜೆಪಿ ಬಗ್ಗೆ ಮಾತ ನಾಡಲಿ’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರನ್ನು ವಿಧಾನ ಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ದಿಂದ ಕೆಳಗಿಳಿಸಲು ಡಿ.ಕೆ.ಶಿವಕುಮಾರ್‌ ಪ್ರಯತ್ನಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸಿದ್ದರಾಮಯ್ಯ ತಂತ್ರ ಹೆಣೆಯುತ್ತಿದ್ದಾರೆ. ಈ ಕಚ್ಚಾಟವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಸೋಮ ವಾರ ಟೀಕಿಸಿದರು.

ಆರ್‌.ಆರ್‌.ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಬೇಕೆಂಬುದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣಗಳು ಕಾಯುತ್ತಿವೆ. ಸೋತ ಬಳಿಕ ಪರಸ್ಪರ ಒಬ್ಬರ ಮೇಲೊಬ್ಬರು ಆರೋಪ ಮಾಡಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ನಡೆಯುತ್ತಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.