ADVERTISEMENT

ಸದಾಶಿವಾನಂದ ಸ್ವಾಮೀಜಿಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 2:01 IST
Last Updated 3 ನವೆಂಬರ್ 2020, 2:01 IST
ಮೈಸೂರಿನಲ್ಲಿರುವ ಸುತ್ತೂರು ಶಾಖಾಮಠದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಗದಗಿನ ಶಿವಾನಂದ ಬೃಹನ್ಮಠದ ನೂತನ ಪೀಠಾಧಿಪತಿ ಸದಾಶಿವಾನಂದ ಸ್ವಾಮೀಜಿ ಅವರನ್ನು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಮ್ಮುಖ ದಲ್ಲಿ ಅಭಿನಂದಿಸಲಾಯಿತು. ಕುಂದೂರು ಮಠ, ದೇಗುಲಮಠ, ವಾಟಾಳು ಮಠದ ಸ್ವಾಮೀಜಿಗಳು, ಪ್ರೊ.ಕೆ.ಅನಂತರಾಮು, ಪ್ರೊ.ನೀಲಗಿರಿ ಎಂ.ತಳವಾರ, ಪ್ರೊ.ಜಿ.ಹೇಮಂತಕುಮಾರ್, ಪ್ರೊ.ಮಲೆಯೂರು ಗುರುಸ್ವಾಮಿ ಇದ್ದಾರೆ
ಮೈಸೂರಿನಲ್ಲಿರುವ ಸುತ್ತೂರು ಶಾಖಾಮಠದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಗದಗಿನ ಶಿವಾನಂದ ಬೃಹನ್ಮಠದ ನೂತನ ಪೀಠಾಧಿಪತಿ ಸದಾಶಿವಾನಂದ ಸ್ವಾಮೀಜಿ ಅವರನ್ನು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಮ್ಮುಖ ದಲ್ಲಿ ಅಭಿನಂದಿಸಲಾಯಿತು. ಕುಂದೂರು ಮಠ, ದೇಗುಲಮಠ, ವಾಟಾಳು ಮಠದ ಸ್ವಾಮೀಜಿಗಳು, ಪ್ರೊ.ಕೆ.ಅನಂತರಾಮು, ಪ್ರೊ.ನೀಲಗಿರಿ ಎಂ.ತಳವಾರ, ಪ್ರೊ.ಜಿ.ಹೇಮಂತಕುಮಾರ್, ಪ್ರೊ.ಮಲೆಯೂರು ಗುರುಸ್ವಾಮಿ ಇದ್ದಾರೆ   

ಮೈಸೂರು: ಗದುಗಿನ ಶಿವಾನಂದ ಬೃಹನ್ಮಠದ ನೂತನ ಪೀಠಾಧಿಪತಿ ಸದಾಶಿವಾನಂದ ಸ್ವಾಮೀಜಿ ಅವರನ್ನು ಸೋಮವಾರ ಇಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಅಭಿನಂದಿಸಲಾಯಿತು.

ಸುತ್ತೂರು ಶಾಖಾ ಮಠದಲ್ಲಿ ನಡೆದ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸಿದ್ದರು.

ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಸ್ವಾಮೀಜಿ, ವಾಟಾಳು ಸೂರ್ಯಸಿಂಹಾಸನ ಮಠದ ಡಾ.ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಕುಂದೂರು ಮಠದ ಶರತ್‌ ಚಂದ್ರ ಸ್ವಾಮೀಜಿ ಪಾಲ್ಗೊಂಡಿ ದ್ದರು. ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತಕುಮಾರ್ ಉದ್ಘಾಟಿಸಿದರು.

ADVERTISEMENT

ಜಯರಾಜೇಂದ್ರ ಸ್ವಾಮೀಜಿ, ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಅನಂತರಾಮು, ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ.ನೀಲಗಿರಿ ಎಂ.ತಳವಾರ, ಡಾ.ಸಿ.ಪಿ.ರಾಮಶೇಷ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.