ADVERTISEMENT

ಸನಾತನ ಧರ್ಮದ ಬಗ್ಗೆ ಅವಹೇಳನ: ಪಿರಿಯಾಪಟ್ಟಣದಲ್ಲಿ ಉದಯನಿಧಿ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2023, 14:34 IST
Last Updated 8 ಸೆಪ್ಟೆಂಬರ್ 2023, 14:34 IST
<div class="paragraphs"><p>ಉದಯನಿಧಿ ಸ್ಟಾಲಿನ್</p></div>

ಉದಯನಿಧಿ ಸ್ಟಾಲಿನ್

   

ಪಿರಿಯಾಪಟ್ಟಣ (ಮೈಸೂರು ಜಿಲ್ಲೆ): ‘ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರ ಪುತ್ರ, ಅಲ್ಲಿನ ಸಚಿವ ಉದಯನಿಧಿ ಸ್ಟಾಲಿನ್‌ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಹಿಂದೂ ಜಾಗರಣ ವೇದಿಕೆಯ ಶೇಖರ್‌ ಕುಮಾರ್‌ ಎಂಬುವರು ತಾಲ್ಲೂಕಿನ ಬೈಲಕುಪ್ಪೆ ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದಾರೆ.

‘ಹಿಂದೂಗಳ ಧಾರ್ಮಿಕ ಭಾವನೆ ಹಾಗೂ ನಂಬಿಕೆಗೆ ಅವಮಾನ ಮಾಡಿದ್ದಾರೆ. ದುರುದ್ದೇಶದ ಹೇಳಿಕೆ ನೀಡಿರುವ ಉದಯನಿಧಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

‘ಸದ್ಯ ಎಫ್‌ಐಆರ್‌ ದಾಖಲಿಸಿಲ್ಲ. ಈ ಸಂಬಂಧ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಕಾನೂನು ಕೋಶದ ಅಭಿಪ್ರಾಯ ಕೋರಿದ್ದು, ಬಳಿಕ ಕ್ರಮ ವಹಿಸಲಾಗುವುದು’ ಎಂದು ಬೈಲಕುಪ್ಪೆ ಠಾಣೆ ಪಿಎಸ್ಐ ಅಜಯ್ ‘ಪ್ರಜಾವಾಣಿ’ಗೆ ತಿಳಿಸಿದರು.

ಓದಿ... ಸನಾತನ ಧರ್ಮ ಕುರಿತ ಹೇಳಿಕೆಗೆ ಬದ್ಧ, ‘ಹತ್ಯಾಕಾಂಡ’ ಎಂದಿಲ್ಲ: ಉದಯನಿಧಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.