ADVERTISEMENT

ಶ್ರೀಗಂಧದ ಮರ ಸಾಗಣೆ: ಬಂಧನ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 1:49 IST
Last Updated 23 ಅಕ್ಟೋಬರ್ 2020, 1:49 IST
ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಶ್ರೀಗಂಧ ಮರ ಕಡಿದು ಸಾಗಿಸಲು ಯತ್ನಿಸುತ್ತಿದ್ದ ಮಹದೇವ ಎಂಬ ಆರೋಪಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿರುವುದು
ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಶ್ರೀಗಂಧ ಮರ ಕಡಿದು ಸಾಗಿಸಲು ಯತ್ನಿಸುತ್ತಿದ್ದ ಮಹದೇವ ಎಂಬ ಆರೋಪಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿರುವುದು   

ಪಿರಿಯಾಪಟ್ಟಣ: ತಾಲ್ಲೂಕಿನ ಅರೇನಹಳ್ಳಿ ಗ್ರಾಮದ ಶ್ರೀಗಂಧದ ನೆಡು ತೋಪಿನಲ್ಲಿ ಅಕ್ರಮವಾಗಿ ಶ್ರೀಗಂಧದ ಮರ ಕಡಿದು ಸಾಗಿಸಲು ಯತ್ನಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಗುರುವಾರ ಬಂಧಿಸಿದ್ದಾರೆ.

ಹುಣಸೂರು ತಾಲ್ಲೂಕಿನ ಬೀರತಮ್ಮನಹಳ್ಳಿ ಹಾಡಿಯ ಮಹದೇವ ಬಂಧಿತ ಆರೋಪಿ. ಇನ್ನುಳಿದ ಆರು ಜನ ಆರೋಪಿಗಳಾದ ಬೀರತಮ್ಮನಹಳ್ಳಿ ಹಾಡಿಯ ಪುಟ್ಟಯ್ಯ, ಮುತ್ತ, ಚಿಕ್ಕಮಾರ, ಬಸವರಾಜು, ಬೈರವ, ಬಲಮಾರ ಪರಾರಿಯಾಗಿದ್ದಾರೆ.

ಬಂಧಿತನಿಂದ 20 ಕೆ.ಜಿ ತೂಕದ 13 ಶ್ರೀಗಂಧದ ತುಂಡುಗಳು, ಒಂದು ಚಾಕು, ಒಂದು ಬ್ಯಾಟರಿ ವಶಪಡಿಸಿಕೊಳ್ಳಲಾಗಿದೆ.

ADVERTISEMENT

ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.