ADVERTISEMENT

ಮಹಾರಾಷ್ಟ್ರ ಸಿ.ಎಂ ಭಾವಚಿತ್ರಕ್ಕೆ ಚಪ್ಪಲಿ ತೋರಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2021, 5:01 IST
Last Updated 31 ಡಿಸೆಂಬರ್ 2021, 5:01 IST
   

ಮೈಸೂರು: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಬವ್ ಠಾಕ್ರೆ ಅವರ ಭಾವಚಿತ್ರಕ್ಕೆ ಚಪ್ಪಲಿ ತೋರಿಸಿ ಮೈಸೂರು ಕನ್ನಡ ಚಳವಳಿಗಾರರ ಒಕ್ಕೂಟದ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಜಯಚಾಮರಾಜ ಒಡೆಯರ್ (ಹಾರ್ಡಿಂಜ್) ವೃತ್ತದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಕರೆಯ ಮೇರೆಗೆ ನಡೆದ ಪ್ರತಿಭಟನೆಯಲ್ಲಿ ಮುಖಂಡರಾದ ತಾಯೂರು ವಿಠಲಮೂರ್ತಿ ಕಪ್ಪು ಬಾವುಟ ಪ್ರದರ್ಶಿಸಿದರು‌.

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ‌ ಹಾನಿ ಮಾಡಿದ ಎಂಇಎಸ್ ಸಂಘಟನೆ ನಿಷೇಧ ಮಾಡುವಂತೆ ಒತ್ತಾಯಿಸಿದರು.

ADVERTISEMENT

ಹೋರಾಟಗಾರರಾದ ಮೂಗೂರು ನಂಜುಂಡಸ್ವಾಮಿ, ಬಿ.ಎ. ಶಿವಶಂಕರ್, ತೇಜೇಶ್ ಲೋಕೇಶ್ ಗೌಡ, ಮಹದೇವ ಸ್ವಾಮಿ, ತೇಜಸ್ವಿ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.