ADVERTISEMENT

ಮೈಸೂರು: ನಿರಂಜನ ಮಠ ಉಳಿಸಲು ಆಗ್ರಹಿಸಿ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 7:45 IST
Last Updated 26 ಸೆಪ್ಟೆಂಬರ್ 2021, 7:45 IST
ಪಾದಯಾತ್ರೆಯಲ್ಲಿ ಭಾಗವಹಿಸಿರುವ ಜನಸಮುಹ
ಪಾದಯಾತ್ರೆಯಲ್ಲಿ ಭಾಗವಹಿಸಿರುವ ಜನಸಮುಹ   

ಮೈಸೂರು: ಇಲ್ಲಿನ ನಿರಂಜನ‌ಮಠ ಉಳಿಸಬೇಕು ಎಂದು ಆಗ್ರಹಿಸಿ ನಿರಂಜನ ಮಠ ಸಂರಕ್ಷಣಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಭಾನುವಾರ ಪಾದಯಾತ್ರೆ ನಡೆಸಿದರು.

ನಂಜನಗೂಡು ತಾಲ್ಲೂಕಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಕರ್ತರು ಮೈಸೂರಿನವರೆಗೂ ಪಾದಯಾತ್ರೆ ನಡೆಸಿ ಬೆಂಬಲ ನೀಡಿದರು. ನಂತರ ಮಠದ ಆವರಣದಲ್ಲಿ ಪ್ರತಿಭಟನಾ ಸಭೆ‌ ನಡೆಸಿದರು.

ಹೊಸಮಠದ ಚಿದಾನಂದ ಸ್ವಾಮೀಜಿ ಚಿದಾನಂದ ಸ್ವಾಮೀಜಿ, ಗಾವಡಗೆರೆ ಮಠದ ನಟರಾಜಸ್ವಾಮೀಜಿ, ಜಪದಕಟ್ಟೆ ಮಠದ ಚಂದ್ರಶೇಖರ ಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು ಭಾಗಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.