ಹುಣಸೂರು (ಮೈಸೂರು ಜಿಲ್ಲೆ): ಪಿರಿಯಾಪಟ್ಟಣ ತಾಲ್ಲೂಕು ಕಂಪ್ಲಾಪುರ ಗ್ರಾಮದ ಎಂ.ಆರ್. ನೋಬಲ್ ಶಾಲಾ ವಾಹನ ಹುಣಸೂರು ತಾಲ್ಲೂಕಿನ ಹಬ್ಬನಕುಪ್ಪೆ ಗ್ರಾಮದ ಬಳಿ ಹಳ್ಳಕ್ಕೆ ಬಿದ್ದು 20 ಮಕ್ಕಳಿಗೆ ಗಾಯವಾಗಿದೆ.
ಬುಧವಾರ ಬೆಳಿಗ್ಗೆ ಶಾಲೆಗೆ ತೆರಳುವ ವೇಳೆ, ಹೊರವಲಯದ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಬಿದ್ದಿದೆ.
ಆ ವಾಹನದಲ್ಲಿ 20 ಮಕ್ಕಳು ತೆರಳುತ್ತಿದ್ದರು. ಎಲ್ಲರಿಗೂ ಗಾಯವಾಗಿದೆ. ಮೂವರಿಗೆ ತೀವ್ರ ಸ್ವರೂಪದ ಗಾಯವಾಗಿದೆ. ಗಾಯಗೊಂಡಿರುವ ಚಾಲಕನನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಿಗೆ ಹುಣಸೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.
‘ಆ ವಾಹನದ ಮುಂದಿನ ಬಲಭಾಗದ ಚಕ್ರ ಕಳಚಿ ಬಿದ್ದಿದ್ದರಿಂದ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿತು’ ಎಂದು ಸ್ಥಳೀಯರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.