ADVERTISEMENT

ಜೈನ ಮುನಿ ಹತ್ಯೆ: ಕಠಿಣ ಶಿಕ್ಷೆ ಆಗಲಿ - ದಿಗಂಬರ ಜೈನ ಸಮಾಜದಿಂದ ಮೌನ ಪ್ರತಿಭಟನೆ

ದಿಗಂಬರ ಜೈನ ಸಮಾಜದಿಂದ ಮೌನ ಪ್ರತಿಭಟನೆ, ಆಗ್ರಹ

​ಪ್ರಜಾವಾಣಿ ವಾರ್ತೆ
Published 12 ಜುಲೈ 2023, 13:08 IST
Last Updated 12 ಜುಲೈ 2023, 13:08 IST
ಬೆಳಗಾವಿ ಜಿಲ್ಲೆಯ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಇಲ್ಲಿನ ದಿಗಂಬರ ಜೈನ ಸಮಾಜ, ಶ್ವೇತಾಂಬರ ಜೈನ ಸಮಾಜ, ಜೈನ ಯುವಕ ಮಂಡಲದ ಸದಸ್ಯರು ಮೈಸೂರಿನ ಗಾಂಧಿ ವೃತ್ತದಲ್ಲಿ ಬುಧವಾರ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ
ಬೆಳಗಾವಿ ಜಿಲ್ಲೆಯ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಇಲ್ಲಿನ ದಿಗಂಬರ ಜೈನ ಸಮಾಜ, ಶ್ವೇತಾಂಬರ ಜೈನ ಸಮಾಜ, ಜೈನ ಯುವಕ ಮಂಡಲದ ಸದಸ್ಯರು ಮೈಸೂರಿನ ಗಾಂಧಿ ವೃತ್ತದಲ್ಲಿ ಬುಧವಾರ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ   

ಮೈಸೂರು: ಬೆಳಗಾವಿ ಜಿಲ್ಲೆಯ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಇಲ್ಲಿನ ದಿಗಂಬರ ಜೈನ ಸಮಾಜ, ಶ್ವೇತಾಂಬರ ಜೈನ ಸಮಾಜ ಹಾಗೂ ಜೈನ ಯುವಕ ಮಂಡಲದ ಸದಸ್ಯರು ಇಲ್ಲಿನ ಗಾಂಧಿ ವೃತ್ತದಲ್ಲಿ ಬುಧವಾರ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.

ಸಮಾಜದ ಅಧ್ಯಕ್ಷ ಎಂ.ಆರ್‌.ಸುನೀಲ್‌ ಕುಮಾರ್‌ ಮಾತನಾಡಿ, ‘ಅಹಿಂಸಾ ತತ್ವ ಸಾರುವ ಮುನಿಗಳನ್ನು ಹಿಂಸಾತ್ಮಕವಾಗಿ ಕೊಲೆ ಮಾಡಿರುವುದು ವಿಷಾದನೀಯ. ಈ ರೀತಿಯ ಘಟನೆಗಳು ನಾಗರಿಕ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮುಂದೆ ಈ ರೀತಿಯ ಘಟನೆಗಳು ಮರುಕಳಿಸದೇ ಇರಲು ಕೃತ್ಯ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಜೈನ ಧರ್ಮವು ವಿಶ್ವಕ್ಕೆ ಅಹಿಂಸೆ ತತ್ವ ಬೋಧಿಸಿದೆ. ಅಧ್ಯಾತ್ಮ ಪ್ರವರ್ತಕರಾದ ಜೈನ ಮುನಿಗಳಿಗೆ ತೊಂದರೆ ಆಗದಂತೆ ಸರ್ಕಾರದಿಂದ ಭದ್ರತೆ ನೀಡಬೇಕು. ಆ ಮೂಲಕ ಭವಿಷ್ಯದಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಬೇಕು. ಸಮಾಜಕ್ಕೆ ಮಾರ್ಗದರ್ಶನ ಮಾಡುವವರ ರಕ್ಷಣೆ ಮಾಡುವುದು ಒಳಿತು’ ಎಂದರು.

ADVERTISEMENT

ಬಳಿಕ ಆಲ್ಬರ್ಟ್‌ ವಿಕ್ಟರ್‌ ರಸ್ತೆ, ಮಿರ್ಜಾ ರಸ್ತೆ, ಮೈಲಾರಿ ಹೋಟೆಲ್‌ ಮಾರ್ಗವಾಗಿ ಮೆರವಣಿಗೆ ಸಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಮೂಲಕ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಮನವಿ ಸಲ್ಲಿಸಿದರು. ‌

ದಿಗಂಬರ ಜೈನ ಸಮಾಜದ ಕಾರ್ಯದರ್ಶಿ ಪಿ.ಎಸ್.ಲಕ್ಷ್ಮೀಶ್ ಬಾಬು, ವಿನೋದ್ ಜೈನ್, ಸುರೇಶ್‌ ಕುಮಾರ್ ಜೈನ್, ಯುವರಾಜ್ ಭಂಡಾರಿ, ರತ್ನರಾಜ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.