ADVERTISEMENT

ಸಂವಿಧಾನ ಬದಲಿಸಲು ಯಾರಿಂದಲೂ ಅಗದು: ಸಂಸದ ವಿ.ಶ್ರೀನಿವಾಸ ಪ್ರಸಾದ್

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 18:25 IST
Last Updated 26 ಜನವರಿ 2023, 18:25 IST
   

ಎಚ್.ಡಿ.ಕೋಟೆ (ಮೈಸೂರು ಜಿಲ್ಲೆ): ‘ಸಂವಿಧಾನ ಉಟ್ಟ ಬಟ್ಟೆಯಲ್ಲ. ಅದನ್ನು ಬದಲಿಸುವವರು ಭಾರತದಲ್ಲಿ ಹುಟ್ಟಿಲ್ಲ. ಮುಂದೆಯೂ ಹುಟ್ಟುವುದಿಲ್ಲ’ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಹೇಳಿದರು.

ತಾಲ್ಲೂಕಿ‌ನ ಯರಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದಿಂದ ಗುರುವಾರ ಆಯೋಜಿಸಿದ್ದ ಅಂಬೇಡ್ಕರ್‌ ಪುತ್ಥಳಿ ಅನಾವರಣ ಹಾಗೂ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‌

‘ಸಂವಿಧಾನವನ್ನು ಬದಲಿಸುತ್ತೇವೆ ಎಂದು ಕೆಲವರು ಹೇಳುತ್ತಾರೆ. ಆದರೆ, ಅದು ಸಾಧ್ಯವಿಲ್ಲ’ ಎಂದರು.

ADVERTISEMENT

‘ವಿದ್ಯೆ, ಬುದ್ಧಿ ಇಲ್ಲದೆ ಬಡತನದಿಂದಾಗಿ ಉಳ್ಳವರ ಜೀತದಾಳುಗಳಾಗಿದ್ದ ಶೋಷಿತರನ್ನು ಅಂಬೇಡ್ಕರ್ ಕನಸುಗಳು ಮುಖ್ಯವಾಹಿನಿಗೆ ತಂದಿವೆ. ಆದರೆ, ಇನ್ನೂ ಅಸ್ಪೃಶ್ಯತೆ ತಾಂಡವವಾಡುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.