ADVERTISEMENT

ಪಿಎಫ್‌ಐ ಕಾಂಗ್ರೆಸ್‌ನ ಪಾಪದ ಕೂಸಾದರೆ ಆರ್‌ಎಸ್‌ಎಸ್ ಏನು?: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 11:49 IST
Last Updated 29 ಸೆಪ್ಟೆಂಬರ್ 2022, 11:49 IST
   

ಮೈಸೂರು: ‘ಪಿಎಫ್ಐ ಸಂಘಟನೆ ಕಾಂಗ್ರೆಸ್‌ ಪಕ್ಷದ ಪಾಪದ ಕೂಸು’ ಎಂದಿರುವ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಇಲ್ಲಿ ಗುರುವಾರ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ‘ಹಾಗಾದರೆ ಆರ್‌ಎಸ್‌ಎಸ್ ಏನು?’ ಎಂದು ಕೇಳಿದರು.

‘ಆರ್‌ಎಸ್‌ಎಸ್‌ ಬಿಜೆಪಿಯ ಪಾಪದ ಕೂಸು’ ಎಂದು ತಿರುಗೇಟು ನೀಡಿದರು.

‘ಕಾಂಗ್ರೆಸ್ ನಿಷೇಧಿಸಬೇಕು’ ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಒಂದು ವೇಳೆ ಕಾಂಗ್ರೆಸ್ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸದೇ ಕ್ಷಮಾಪಣಾ ಅರ್ಜಿ ಬರೆಯುತ್ತಾ ಕುಳಿತಿದ್ದರೆ ಅವರು ಇಂದಿಗೂ ಬ್ರಿಟಿಷರ ಗುಲಾಮರಾಗಿಯೇ ಇರಬೇಕಾಗಿತ್ತು ಎನ್ನುವುದನ್ನು ಮರೆಯದಿರಲಿ’ ಎಂದು ಖಾರವಾಗಿ ನುಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.