ಮೈಸೂರು: ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ, ವಕೀಲರಾಗಿದ್ದ ದಿವಂಗತ ಎಸ್.ಎಂ.ಪ್ರಭುಸ್ವಾಮಿ ಅವರ ಪತ್ನಿ ಶಿವನಾಗಮ್ಮ(90) ಸೋಮವಾರ ಬೆಳಿಗ್ಗೆ ನಿಧನರಾದರು.
ಅವರಿಗೆ ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರಿದ್ದಾರೆ.
ಎಸ್.ಪಿ.ಶಶಿಕಲಾ ಹಾಗೂ ಪ್ರೊ. ಎಸ್.ಪಿ.ಉಮಾದೇವಿ ಪುತ್ರಿಯರು. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಷಡಕ್ಷರಸ್ವಾಮಿ, ಎಸ್.ಪಿ. ಮಂಜುನಾಥ್ ಹಾಗೂ ಉದಯ ಶಂಕರ್ ಪುತ್ರರು.
ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸುತ್ತೂರು ಮಠದ ಮೂಲಗಳು ತಿಳಿಸಿವೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.