ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟ ತಪ್ಪಲಿನ ಸ್ಮಶಾನದಲ್ಲಿ ಬುಧವಾರ ನಿಧನರಾದ ಪ್ರೊ.ಎಸ್.ಎಲ್.ಭೈರಪ್ಪ ಅವರ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವ ಸಲ್ಲಿಸಿ, ಹೊಯ್ಸಳ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತಿಮ ಸಂಸ್ಕಾರದ ಕಾರ್ಯಗಳನ್ನು ನಡೆಸಲಾಯಿತು.
ಪೊಲೀಸ್ ಅಧಿಕಾರಿ ಶಿವಾನಂದ ನೇತೃತ್ವದ ಹತ್ತು ಜನರ ತಂಡವು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಗೌರವ ಸಲ್ಲಿಸಿತು. ಅದಕ್ಕೂ ಮೊದಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನಪರಿಷತ್ ಸದಸ್ಯ ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಪುಷ್ಪ ಗುಚ್ಛ ಇಟ್ಟು ಅಂತಿಮ ನಮನ ಸಲ್ಲಿಸಿದರು. ರಾಷ್ಟ್ರಧ್ವಜವನ್ನು ಪ್ರಹ್ಲಾದ್ ಜೋಷಿ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಅವರು ಭೈರಪ್ಪ ಅವರ ಮಕ್ಕಳಾದ ರವಿಶಂಕರ್ ಹಾಗೂ ಉದಯ್ ಶಂಕರ್ ಅವರಿಗೆ ಹಸ್ತಾಂತರಿಸಿದರು.
ಎಸ್.ಎಲ್.ಭೈರಪ್ಪ ಅವರ ಹುಟ್ಟೂರು ಹಾಸನದ ಸಂತೇಶಿವಾರ ಗ್ರಾಮದಿಂದ ಮೂರು ಬಸ್ಗಳಲ್ಲಿ ನೂರೈವತ್ತಕ್ಕೂ ಹೆಚ್ಚು ಗ್ರಾಮಸ್ಥರು ಆಗಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.