ಮೈಸೂರು: ಮೈಸೂರು ಜಿಲ್ಲಾ ಛಾಯಾ ಸ್ನೇಹ ಸೌಹಾರ್ದ ಸಹಕಾರಿ ಸಂಘದಿಂದ ಜ.3ರಂದು ಸಂಜೆ 4ಕ್ಕೆ ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕಲ್ಯಾಣಮಂಟಪದಲ್ಲಿ ‘ಸೌಹಾರ್ದ ಸಹಕಾರಿ ದಿನಾಚರಣೆ’, 2026ರ ದಿನಚರಿ ಮತ್ತು ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
‘ಶಾಸಕ ಜಿ.ಟಿ. ದೇವೇಗೌಡ ಉದ್ಘಾಟಿಸುವರು. ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ದಿನಚರಿಗಳನ್ನು, ಶಾಸಕ ಟಿ.ಎಸ್. ಶ್ರೀವತ್ಸ ಕ್ಯಾಲೆಂಡರ್ಗಳನ್ನು ಬಿಡುಗಡೆ ಮಾಡುವರು. ಶಾಸಕ ಕೆ.ಹರೀಶ್ಗೌಡ ಅಸಂಘಟಿತ ಕಾರ್ಮಿಕ ಚೀಟಿಗಳನ್ನು ವಿತರಿಸುವರು. ಕಾಂಗ್ರೆಸ್ ಮುಖಂಡ ಬಸವರಾಜ್, ಕಾನೂನು ಸಲಹೆಗಾರ ಎಸ್.ಟಿ. ಗುರುಪ್ರಸಾದ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು’ ಎಂದು ಅಧ್ಯಕ್ಷ ಎಂ.ಎಸ್. ರಾಜೇಂದ್ರಕುಮಾರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಉಪಾಧ್ಯಕ್ಷ ಸಿ. ಅಭಿನಂದನ್, ‘ಪ್ರತಿಭಾ ಪುರಸ್ಕಾರ, ಛಾಯಾ ಸಾಧಕರಿಗೆ ಗೌರವ, ಉನ್ನತ ಶಿಕ್ಷಣ ಪಡೆದವರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ’ ಎಂದರು.
ಕಾರ್ಯಾಧ್ಯಕ್ಷ ಎಂ.ಎಸ್. ಶ್ರೀನಿಧಿ, ಜಿ.ಟಿ. ಸುರೇಶ್ಕುಮಾರ್, ಎಚ್.ಎನ್. ಶ್ರೀನಿವಾಸ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.