ADVERTISEMENT

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ: ಬಿಜೆಪಿ, ಬಿಎಸ್‌ಪಿಯಿಂದ ಪ್ರಚಾರ ಬಿರುಸು

ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ: ದಿನವಿಡೀ ಪ್ರಚಾರ ನಡೆಸಿದ ಸಚಿವ ಎಸ್‌.ಟಿ.ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 24 ಮೇ 2022, 3:12 IST
Last Updated 24 ಮೇ 2022, 3:12 IST
ವಿಧಾನಪರಿಷತ್ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಸಚಿವ ಎಸ್.ಟಿ.ಸೋಮಶೇಖರ್ ಸೋಮವಾರ ಮೈಸೂರಿನಲ್ಲಿ ಮತಯಾಚಿಸಿದರು (ಎಡಚಿತ್ರ). ಮೈಸೂರಿನಲ್ಲಿ ಸೋಮವಾರ ನಡೆದ ಬಿಎಸ್‌ಪಿಯ ವಿಭಾಗಮಟ್ಟದ ‘ಸಂವಿಧಾನ ರಕ್ಷಿಸೋಣ– ದೇಶವನ್ನು ಉಳಿಸೋಣ’ ಜನಜಾಗೃತಿ ಅಭಿಯಾನದ ಪರಿಶೀಲನಾ ಸಭೆ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಪಕ್ಷದ ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು
ವಿಧಾನಪರಿಷತ್ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಸಚಿವ ಎಸ್.ಟಿ.ಸೋಮಶೇಖರ್ ಸೋಮವಾರ ಮೈಸೂರಿನಲ್ಲಿ ಮತಯಾಚಿಸಿದರು (ಎಡಚಿತ್ರ). ಮೈಸೂರಿನಲ್ಲಿ ಸೋಮವಾರ ನಡೆದ ಬಿಎಸ್‌ಪಿಯ ವಿಭಾಗಮಟ್ಟದ ‘ಸಂವಿಧಾನ ರಕ್ಷಿಸೋಣ– ದೇಶವನ್ನು ಉಳಿಸೋಣ’ ಜನಜಾಗೃತಿ ಅಭಿಯಾನದ ಪರಿಶೀಲನಾ ಸಭೆ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಪಕ್ಷದ ಮುಖಂಡರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು   

ಮೈಸೂರು: ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣಾ ಪ್ರಚಾರ ಕಾರ್ಯ ಸೋಮವಾರ ಬಿರುಸುಗೊಂಡಿತು. ಸಚಿವ ಎಸ್.ಟಿ.ಸೋಮಶೇಖರ್ ಬಿಜೆಪಿ ಪರವಾಗಿ ದಿನವಿಡಿ ಪ್ರಚಾರ ನಡೆಸಿದರೆ, ಜೆಡಿಎಸ್‌ ತನ್ನ ನೂತನ ಕಚೇರಿಯನ್ನು ತೆರೆಯಿತು.

ಬಹುಜನ ಸಮಾಜ ಪಕ್ಷವು ಚುನಾವಣಾ ಸಂಬಂಧ ಉನ್ನತಮಟ್ಟದ ಸಭೆ ನಡೆಸಿತು. ಎಸ್‌ಡಿಪಿಐ ರಫತ್‌ಉಲ್ಲಾ
ಖಾನ್ ನಾಮಪತ್ರ ಸಲ್ಲಿಸಿ, ಅಧಿಕೃತವಾಗಿ ಚುನಾವಣಾ ಕಣಕ್ಕೆ ಧುಮುಕಿದರೆ, ಕರ್ನಾಟಕ ರಾಜ್ಯ ರೈತ ಸಂಘ, ಸ್ವರಾಜ್ ಇಂಡಿಯಾ ಸೇರಿದಂತೆ ಪ್ರಗತಿ
ಪರ ಸಂಘಟನೆಗಳು ಪ್ರಸನ್ನ ಎನ್ ಗೌಡ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದವು.

ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಪರ ಎಸ್.ಟಿ.ಸೋಮಶೇಖರ್ ಅವರು ನಗರದ ನಾನಾ ಭಾಗಗಳಿಗೆ ತೆರಳಿ ಪದವೀಧರರು, ಶಿಕ್ಷಕರನ್ನು ಭೇಟಿ ಮಾಡಿ ಮತ ಯಾಚಿಸಿದರು.

ADVERTISEMENT

ಸಾಮಾನ್ಯವಾಗಿ ಚುನಾವಣೆಯಲ್ಲಿ ಸೋತ ಬಳಿಕ ಅಭ್ಯರ್ಥಿಗಳು ಜನರ ಬಳಿಗೆ ಹೋಗುವುದಿಲ್ಲ. ಆದರೆ, ರವಿಶಂಕರ್ ಕಳೆದ ಬಾರಿಯ ಚುನಾವಣೆ ಯಲ್ಲಿ ಕೇವಲ 160 ಮತಗಳ ಅಂತರದಿಂದ ಸೋಲುಂಡರೂ ಆರು ವರ್ಷಗಳಿಂದ ಜನರ ದನಿಯಾಗಿ ಕೆಲಸ ಮಾಡುತ್ತಿ
ದ್ದಾರೆ ಎಂದು ವಿವಿಧೆಡೆ ಹೇಳಿದರು.

ಮೈಸೂರು ಜಿಲ್ಲೆಯ ಅಭಿವೃದ್ಧಿಗಾಗಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನು ವಿವರಿಸಿದ ಅವರು, ಪದವೀಧರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.