ADVERTISEMENT

ನೂತನ ಎಎಸ್ಪಿಯಾಗಿ ರಿಷ್ಯಂತ್ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 18 ಜೂನ್ 2019, 17:44 IST
Last Updated 18 ಜೂನ್ 2019, 17:44 IST
ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ.ಬಿ.ರಿಷ್ಯಂತ್ ಮಂಗಳವಾರ ಎಎಸ್‌ಪಿ ಸ್ನೇಹಾ ಅವರಿಂದ ಅಧಿಕಾರ ಸ್ವೀಕರಿಸಿದರು
ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ.ಬಿ.ರಿಷ್ಯಂತ್ ಮಂಗಳವಾರ ಎಎಸ್‌ಪಿ ಸ್ನೇಹಾ ಅವರಿಂದ ಅಧಿಕಾರ ಸ್ವೀಕರಿಸಿದರು   

ಮೈಸೂರು: ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿ.ಬಿ.ರಿಷ್ಯಂತ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಇಲ್ಲಿನ ಎಸ್‌.ಪಿ ಕಚೇರಿಯಲ್ಲಿ ಎಎಸ್‌ಪಿ ಸ್ನೇಹಾ ಅವರು ಅಧಿಕಾರ ಹಸ್ತಾಂತರಿಸಿದರು.

2015ನೇ ಬ್ಯಾಚಿನ ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿರುವ ಇವರು ಮಂಗಳೂರಿನಲ್ಲಿ ಎಎಸ್‌ಪಿಯಾಗಿ, ಬಾಗಲಕೋಟೆಯಲ್ಲಿ ಎಸ್‌.ಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಅಧಿಕಾರ ಸ್ವೀಕರಿಸಿದ ತಕ್ಷಣವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯಲ್ಲಿನ ಅಪರಾಧ ಚಟುವಟಿಕೆಗಳ ಕುರಿತು ಮಾಹಿತಿ ಕಲೆ ಹಾಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.