ADVERTISEMENT

ಎಚ್ಚರಿಕೆಯಿಂದ ಮಾತನಾಡಿ: ಕುಮಾರಸ್ವಾಮಿ

ತನ್ವೀರ್‌ ಸೇಠ್‌ ಮೇಲಿನ ಹಲ್ಲೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2019, 20:15 IST
Last Updated 20 ನವೆಂಬರ್ 2019, 20:15 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಮೈಸೂರು: ‘ಶಾಸಕ ತನ್ವೀರ್‌ಸೇಠ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಮಾತನಾಡಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.

‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಒಂದು ಸಂಘಟನೆ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿದ್ದೇ ಶಾಸಕರ ಮೇಲಿನ ಹಲ್ಲೆಗೆ ಕಾರಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳುತ್ತಾರೆ. ಇನ್ನು, ಗೃಹ ಸಚಿವರು ಸಂಘಟನೆಯ ಹೆಸರನ್ನೇ ಹೇಳುತ್ತಾರೆ. ಹೀಗಾದರೆ, ತನಿಖೆಗೆ ಹಿನ್ನಡೆಯಾಗುವುದಿಲ್ಲವೇ?’ ಎಂದು ಕೇಳಿದರು.

ಮೊದಲು ನಿಷ್ಪಪಕ್ಷಪಾತ ತನಿಖೆ ನಡೆಯಲಿ. ತನಿಖೆ ಪೂರ್ಣಗೊಳ್ಳುವವರೆಗೂ ಯಾವುದೇ ಸಂಘಟನೆಯ ಹೆಸರನ್ನು ತರಬಾರದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.