ಮೈಸೂರು: ‘ದಸರಾ ಜಂಬೂಸವಾರಿ ಪುಷ್ಪಾರ್ಚನೆಗೆ ಪ್ರಧಾನಿ ನರೇಂದ್ರ ಮೋದಿ ಬರುವುದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದರು.
ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಚಾಮುಂಡಿ ಬೆಟ್ಟದಲ್ಲಿ ನಡೆಯುವ ನಾಡಹಬ್ಬ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬರಲಿದ್ದಾರೆ. ಅವರು, ಅರಮನೆಗೆ ಭೇಟಿ ಕೊಡುತ್ತಾರೆಯೇ ಎಂದು ಕೇಳಲಾಗಿದೆ. ಆ ಬಗ್ಗೆ ರಾಷ್ಟ್ರಪತಿ ಕಚೇರಿಯಿಂದ ಇನ್ನೂ ಮಾಹಿತಿ ಬಂದಿಲ್ಲ. ಉದ್ಘಾಟನೆ ಕಾರ್ಯಕ್ರಮಕ್ಕೆ ಕೇಂದ್ರದ ನಾಲ್ವರು ಸಚಿವರು ಬರುವ ಸಾಧ್ಯತೆ ಇದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.