ಮೈಸೂರು: ಪ್ರೀತಿಸಲಿಲ್ಲ ಎಂಬ ಕಾರಣಕ್ಕೆ ಯುವರಾಜ ಕಾಲೇಜಿನ ವಿದ್ಯಾರ್ಥಿ ರೋಹಿತ್ (20) ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದಿದ್ದಾನೆ. ಬಿಡಿಸಲು ಹೋದ ಮತ್ತೊಬ್ಬ ವಿದ್ಯಾರ್ಥಿನಿಯ ಕೈಗೂ ಗಾಯಗಳಾಗಿವೆ. ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.
ರೋಹಿತ್ ತನ್ನ ಜತೆ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಸೋಮವಾರ ಮಧ್ಯಾಹ್ನ ತರಗತಿಯಲ್ಲಿ ಪ್ರೀತಿಸುವಂತೆ ಕೇಳಿದ್ದಾನೆ. ವಿದ್ಯಾರ್ಥಿನಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಆತ ವಿದ್ಯಾರ್ಥಿನಿಯ ಕೆನ್ನೆಯ ಭಾಗಕ್ಕೆ ಎರಡು ಬಾರಿ ಇರಿದಿದ್ದಾನೆ. ಇದರಿಂದ ತೀವ್ರತರವಾದ ಗಾಯಗಳಾಗಿವೆ. ಅಷ್ಟರಲ್ಲಿ ತಡೆಯಲು ಮುಂದಾದ ಮತ್ತೊಬ್ಬ ವಿದ್ಯಾರ್ಥಿನಿಯ ಕೈಗೂ ಗಾಯಗಳಾಗಿವೆ. ನಂತರ, ರೋಹಿತ್ ತನ್ನ ಕೈಯನ್ನು ಕುಯ್ದುಕೊಂಡಿದ್ದಾನೆ.
ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆದ ರೋಹಿತ್ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.